Breaking News

ಲಾಕ್ ಡೌನ್: ಊರಿಗೆ ಹೊಗಲಾರದಕ್ಕೆ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Spread the love

ಚಾಮರಾಜನಗರ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಊರಿಗೆ ಹೋಗಲಾಗದೆ ಹತಾಶೆಗೊಂಡಿದ್ದ ಕೇರಳದ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ.

ಅಂಜುಂ (35) ಆತ್ಮಹತ್ಯೆ ಶರಣಾದ ವ್ಯಕ್ತಿ. ಕೇರಳದ ಮಲ್ಲಪ್ಪುರಂನ ನಿವಾಸಿ ಅಂಜುಂ ಇಲ್ಲಿನ ಕೆಎಸ್‍ಆರ್ ಟಿಸಿ ಬಳಿ ಇರುವ ಮಯೂರು ಹೋಟೆಲ್‍ನಲ್ಲಿ ಕೆಲಸ ಮಾಡಿಕೊಂಡಿದ್ದನು. ಆದ್ರೆ ಕೊರೊನಾದಿಂದ ಲಾಕ್ ಡೌನ್ ಘೋಷಣೆಯಾದ ಬಳಿಕ ಊರಿಗೆ ತೆರಳಲು ಆಗಲಿಲ್ಲ. ಇದರಿಂದ ಹತಾಶೆಗೊಂಡಿದ್ದ ವ್ಯಕ್ತಿಗುರುವಾರ ರಾತ್ರಿ ಹೋಟೆಲ್ ರೂಮ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.

ಸ್ಥಳಕ್ಕೆ ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರುಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ

Spread the loveಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ