Breaking News

ಅರೆಬೆತ್ತಲೆ ಸ್ಥಿತಿಯಲ್ಲಿಯೇ ಪೊಲೀಸ್ ಠಾಣೆ ಕರೆತಂದ ಆರೋಪಿ

Spread the love

ಚಿತ್ರದುರ್ಗ : ಪೊಲೀಸರು ಆರೋಪಿಯ ಬಂಧನಕ್ಕೆ ತೆರಳಿದ್ದ ವೇಳೆ ಸ್ನಾನಕ್ಕೆ ಹೋಗಿದ್ದ ವೇಣುಗೋಪಾಲ್, ಅದೇ ಅರೆಬೆತ್ತಲೆ ಸ್ಥಿತಿಯಲ್ಲಿ ಹೊರ ಬಂದಿದ್ದಾರೆ. ಠಾಣೆಗೆ ಬರುವಂತೆ ಹೆಡ್ ಕಾನ್ಸ್​ಟೇಬಲ್ ಚಂದ್ರಾನಾಯ್ಕ್ ಸೂಚಿಸಿದ್ದಾರೆ. ಈ ವೇಳೆ ಅದೇ ಅರೆಬೆತ್ತಲೆ ಸ್ಥಿತಿಯಲ್ಲೇ ಕೈಲಿ ಜಗ್ ಹಿಡಿದುಕೊಂಡು ಪೊಲೀಸರ ಜತೆ ಠಾಣೆಗೆ ಆಗಮಿಸಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆರ್​ಎಸ್​ಎಸ್​ ಕಾರ್ಯಕರ್ತ ವೇಣುಗೋಪಾಲ್ ಮೇಲೆ ಪೊಲೀಸರು ಅನಾಗರಿಕ ವರ್ತನೆ ತೋರಿದ್ದಾರೆಂದು ಆರೋಪಿಸಿ ಕೆಲವರು ಕಿಡಿ ಕಾರಿದ್ದಾರೆ. ಇನ್ನೂ ಕೆಲವರು ರೌಡಿಶೀಟರ್ ಆಗಿರುವ ವೇಣುಗೋಪಾಲ್ ದುರುದ್ದೇಶದಿಂದ ಅರೆಬೆತ್ತಲೆಯಾಗಿ ಬಂದು ಹುಚ್ಚಾಟ ಮೆರೆದಿದ್ದಾನೆ. ಆ ಮೂಲಕ ಕರ್ತವ್ಯ ನಿರತ ಪೊಲೀಸರ ಮನೋಸ್ಥೈರ್ಯ ಕುಗ್ಗಿಸಲು ಯತ್ನಿಸಿದ್ದಾನೆಂದು ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿದ್ದಾರೆ.


Spread the love

About Laxminews 24x7

Check Also

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯದ ಐತಿಹಾಸಿಕ ತೀರ್ಪು

Spread the love ಬೆಳಗಾವಿ ನಗರವನ್ನು ಬೆಚ್ಚಿಬೀಳಿಸಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತೀರ್ಪು ಇಂದು ಪ್ರಕಟವಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ