ಧಾರವಾಡ: ತುಂಬಿ ಹರಿಯುತ್ತಿರುವ ಸೇತುವೆ ಮೇಲೆಯೇ ಬಸ್ ಚಲಾಯಿಸಿ ಚಾಲಕ ಉದ್ಧಟತನ ಪ್ರದರ್ಶಿಸಿರುವ ಘಟನೆ ಇನಾಮಹೊಂಗಲ ಮತ್ತು ಹಾರೊಬೆಳವಡಿ ಗ್ರಾಮದ ಮಧ್ಯ ಇರುವ ತಾತ್ಕಾಲಿಕ ಸೇತುವೆ ಬಳಿ ನಡೆದಿದೆ.
ನಿನ್ನೆ ರಾತ್ರಿ ಜಿಲ್ಲೆಯ ಅನೇಕ ಭಾಗಗಳಲ್ಲಿ ಮಳೆಯಾದ ಹಿನ್ನೆಲೆ ನದಿ- ಹಳ್ಳಕೊಳ್ಳಗಳು ತುಂಬಿ ಸೇತುವೆ ಮೇಲೆ ನೀರು ಹರಿಯುತ್ತಿದೆ. ಇಂದು ಬೆಳಗ್ಗೆ ಸವದತ್ತಿಯಿಂದ ಧಾರವಾಡಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕ ನೀರು ಹರಿಯುತ್ತಿರುವ ಸೇತುವೆ ಮೇಲೆಯೇ ಬಸ್ ಚಲಾಯಿಸಿದ್ದಾನೆ. ಸೇತುವೆಯ ಒಂದು ಭಾಗ ಕುಸಿದ ಪರಿಣಾಮ ಬಸ್ ನಡು ನೀರಿನಲ್ಲಿ ಸ್ಥಗಿತಗೊಂಡಿದ್ದು, ಸ್ವಲ್ಪ ಯಾಮಾರಿದ್ರೂ ಅಪಾಯ ಕಟ್ಟಿಟ್ಟ ಬುತ್ತಿಯಾಗಿತ್ತು.
ಇನ್ನು ಈ ದೃಶ್ಯವನ್ನು ನೋಡಿದ ಸ್ಥಳೀಯರು ಆತಂಕ್ಕೊಳಗಾಗಿದ್ದು, ಬಸ್ನ್ನು ಅಲ್ಲೇ ಬಿಟ್ಟು ಮೇಲೆ ಬರುವಂತೆ ಚಾಲಕನಿಗೆ ಹೇಳಿದ್ದಾರೆ.ಆದರೆ ಚಾಲಕ ಮಾತ್ರ ಬಸ್ ನಿಲ್ಲಿಸದೇ ಹರಸಾಹಸ ಪಟ್ಟು ದಡ ಮುಟ್ಟಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ.