Breaking News

ಫೋಟೋಶೂಟ್​ ಹುಚ್ಚಿನಿಂದಾಗಿ ರೈಲ್ವೆ ಹಳಿ ಮೇಲೆ ನಿಂತು ಪ್ರಾಣ ಕಳೆದುಕೊಂಡ ಯುವಕ

Spread the love

ದಾವಣಗೆರೆ: ಫೋಟೋಶೂಟ್​ ಹುಚ್ಚಿನಿಂದಾಗಿ ರೈಲ್ವೆ ಹಳಿ ಮೇಲೆ ನಿಂತು ಫೋಟೋ ತೆಗೆದುಕೊಳ್ಳಲು ಮುಂದಾದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ.ದಾವಣಗೆರೆಯ ಡಿಸಿಎಂ ಟೌನ್‌ಶಿಪ್‌ನ ಬಳಿ ಈ ದುರಂತ ಸಂಭವಿಸಿದೆ.ಸಚಿನ್ (16) ಎಂಬಾತ ಸಾವಿಗೀ ಡಾದ ಯುವಕ ಫೋಟೋಶೂಟ್​ಗೆಂದು ಈ ಯುವಕ ಗೆಳೆಯರೊಂದಿಗೆ ಇಲ್ಲಿಗೆ ಬಂದಿದ್ದಾನೆ.ಒಳ್ಳೆಯ ಬ್ಯಾಕ್​ಗ್ರೌಂಡ್​​ ಸಿಗುತ್ತದೆ ಎಂದು ಹಳಿ ಮೇಲೆ ನಿಂತವ ಈಗ ಮರಳಿ ಬಾರದ ಲೋಕಕ್ಕೆ ತೆರಳಿದ್ದಾನೆ. ರೈಲು ಬರುವಾಗ ಹಳಿ ಮೇಲೆ ನಿಂತು ಫೋಟೋ ತೆಗೆದುಕೊಂಡರೆ ಚೆನ್ನಾಗಿ ಕಾಣಿಸುತ್ತದೆ ಎಂದು ಫೋಟೋ ತೆಗೆಸಿಕೊಳ್ಳಲು ಮುಂದಾಗಿದ್ದಾನೆ. ರೈಲು ಪಕ್ಕದ ಹಳಿ ಮೇಲೆ ಸಾಗುತ್ತದೆ ಎಂದುಕೊಂಡಿದ್ದ. ಆದರೆ ರೈಲು ಸಾಗುವ ಹಳಿ ಮೇಲೇ ಆತ ನಿಂತಿದ್ದು, ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.


Spread the love

About Laxminews 24x7

Check Also

ಕಾಂಗ್ರೆಸ್ ಸರ್ಕಾರದಿಂದ ವಿಶೇಷ ಅಧಿವೇಶನ ಕರೆದು ಕೇಂದ್ರದ ಯೋಜನೆಗೆ ಅಡ್ಡಗಾಲು: ಆರ್.ಅಶೋಕ್‌

Spread the loveಬೆಂಗಳೂರು: ಕಾಂಗ್ರೆಸ್  ಸರ್ಕಾರ ವಿಶೇಷ ಅಧಿವೇಶನ  ಕರೆದು ಕೇಂದ್ರ ಸರ್ಕಾರದ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನ ಮಾಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ