ಬೆಂಗಳೂರು: ಡ್ರಗ್ಸ್ ಮಾಫಿಯಾ ನಂಟಿನ ಆರೋಪದ ಮೇರೆಗೆ ಸ್ಯಾಂಡಲ್ವುಡ್ ಸ್ಟಾರ್ ನಟ ದೂದ್ಪೇಡ ದಿಗಂತ್ರನ್ನು ಸಿಸಿಬಿ ಪೊಲೀಸರು 2ನೇ ಬಾರಿ ವಿಚಾರಣೆ ಆರಂಭಿಸಿದ್ದಾರೆ.
ದಿಗಂತ್ಗೆ 2ನೇ ಬಾರಿ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಸಿಸಿಬಿ ಅಧಿಕಾರಿಗಳ ನೋಟಿಸ್ ಹಿನ್ನೆಲೆಯಲ್ಲಿ ಬೆಂಗಳೂರು ಹೊರವಲಯದಲ್ಲಿ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದ ದಿಗಂತ್, ಚಿತ್ರೀಕರಣ ಅರ್ಧಕ್ಕೆ ಮೊಟಕುಗೊಳಿಸಿ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬೆಳಿಗ್ಗೆ 11.30ಕ್ಕೆ ಹಾಜರಾದ ದಿಗಂತ್ರನ್ನು ಸಿಸಿಬಿ ತನಿಖಾಧಿಕಾರಿ ಪುನೀತ್ ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ.
ಕಳೆದ ವಾರ ನಡೆದ ವಿಚಾರಣೆ ವೇಳೆ ದಿಗಂತ್ ನೀಡಿದ ಹೇಳಿಕೆಗಳು, ಮೊಬೈಲ್ ರಿಟ್ರೀವ್ ಆದ ಬಳಿಕ ಸಿಕ್ಕ ಮಾಹಿತಿಗಳು ಒಂದಕ್ಕೊಂದು ತಾಳೆಯಾಗುತ್ತಿಲ್ಲಹೀಗಾಗಿ ದಿಗಂತ್ ಕಳೆದ ವಾರ ನಡೆದ ವಿಚಾರಣೆ ವೇಳೆ ಸುಳ್ಳು ಹೇಳಿದ್ದಾರಾ ಎಂಬ ಅನುಮಾನ ಸಿಸಿಬಿ ಪೊಲೀಸರಿಗೆ ಶುರುವಾಗಿದೆ. ಹೀಗಾಗಿಯೇ ಇಂದು ದಿಗಂತ್ರನ್ನು ವಿಚಾರಣೆಗೆ ಕರೆಯಲಾಗಿದೆ ಎನ್ನಲಾಗಿದೆ.
ಬಂಧಿತ ಇಬ್ಬರು ಡ್ರಗ್ಸ್ ಪೆಡ್ಲರ್ಗಳಿಗೂ ನಿಮಗೂ ಸಂಬಂಧ ಏನು, ಅವರ ಜೊತೆ ನಿಮಗೆ ಯಾವ ರೀತಿ ಸಂಪರ್ಕ ಇತ್ತು, ಸಂಪರ್ಕ ಬೆಳೆದಿದ್ದು ಹೇಗೆ, ನಿಮಗೂ ಪೆಡ್ಲರ್ ಸಂಪರ್ಕ ಬೆಳೆದಿದ್ದು ಯಾವಾಗ ಸೇರಿದಂತೆ ದಿಗಂತ್ಗೆ ಸಿಸಿಬಿ ತನಿಖಾಧಿಕಾರಿಗಳು ಪ್ರಶ್ನೆಗಳ ಸುರಿಮಳೆಯನ್ನೇ ಹಾಕಿದ್ದಾರೆ ಎನ್ನಲಾಗಿದೆ.
ಕಳೆದ ವಾರ ನಡೆದ ವಿಚಾರಣೆ ವೇಳೆ ನಾನು ಮಾನಸಿಕ ಖಿನ್ನತೆಯಿಂದಾಗಿ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದೆ, ನಂತರ ತೆಗೆದುಕೊಂಡಿಲ್ಲ ಎಂದು ದಿಗಂತ್ ಒಪ್ಪಿಕೊಂಡಿದ್ದರು ಎನ್ನಲಾಗಿದೆ. ಹೀಗಾಗಿ ಇಂದು ದಿಗಂತ್ ವಿಚಾರಣೆ ವೇಳೆ ಯಡವಟ್ಟು ಮಾಡಿಕೊಂಡರೆ ಸಿಸಿಬಿ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಾರಣ ಇಬ್ಬರು ಡ್ರಗ್ ಪೆಡ್ಲರ್ಗಳ ಜತೆ ದಿಂಗತ್ ಸಂಪರ್ಕ ಹೊಂದಿರುವುದು ಸಿಸಿಬಿ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ದಿಗಂತ್ ವಿಚಾರಣೆಯ ದಿಕ್ಕು ತಪ್ಪಿಸಲು ಸುಳ್ಳು ಹೇಳಲು ಪ್ರಯತ್ನಿಸಿದರೆ ಅರೆಸ್ಟ್ ಆಗೋದು ಖಚಿತ ಎಂಬ ಮಾತುಗಳು ಸಿಸಿಬಿ ವಲಯದಲ್ಲಿ ಕೇಳಿ ಬರುತ್ತಿವೆ.