ಬೆಂಗಳೂರು: ಬಾಲಿವುಡ್ನಲ್ಲಿ ಭುಗಿಲೆದ್ದಿರುವ ಡ್ರಗ್ ಮಾಫಿಯಾಕ್ಕೆ ಸಂಬಂಧಿಸಿದಂತೆ ದೀಪಿಕಾ ಪಡುಕೋಣೆ ಶನಿವಾರ ವಿಚಾರಣೆಗೆ ಹಾಜರಾಗಲಿದ್ದಾರೆ. ಸಾರಾ ಅಲಿಖಾನ್, ರಾಕುಲ್ ಪ್ರೀತ್ ಸಿಂಗ್, ಶ್ರದ್ಧಾ ಕಪೂರ್ ಸಹ ವಿಚಾರಣೆ ಎದುರಿಸಲಿದ್ದಾರೆ. ಇದೀಗ ಈ ಎಲ್ಲ ಬೆಳವಣಿಗೆಗಳ ಬಗ್ಗೆ ನಟಿ, ರಾಜಕಾರಣಿ ಮಾಳವಿಕಾ ಅವಿನಾಶ್ ಪ್ರತಿಕ್ರಿಯಿಸಿದ್ದಾರೆ.
ನಿಮಗೆಲ್ಲರಿಗೂ ಗೊತ್ತಿರುವಂತೆ, ಖಿನ್ನತೆ ಎನ್ನುವ ಕಥೆ ಕಟ್ಟಿ ಅದರ ಮೂಲಕ ಸಾಮಾಜಿಕ ಕಳಕಳಿಯ ಪ್ರಚಾರ ಪಡೆದ ದೀಪಿಕಾ, ಇದೀಗ ಆ ಮಾಲ್ ಎಂಬ ಹೊಗೆ ಅವರನ್ನೇ ಆವರಿಸಿದೆ. ಅವಳನ್ನೇ ರೋಲ್ ಮಾಡೆಲ್ ಎಂದು ಹಿಂಬಾಲಿಸುತ್ತಿರುವವರಿಗೆ ಇದು ನಿಜಕ್ಕೂ ಬೇಸರದ ಸಂಗತಿ’ ಎಂದು ಟ್ವೀಟ್ ಮಾಡಿದ್ದಾರೆ.ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಖಿನ್ನತೆಯೂ ಮುಖ್ಯ ಕಾರಣ ಎಂದು ತಿಳಿಯುತ್ತಿದ್ದಂತೆ, ಆ ಬಗ್ಗೆ ದೀಪಿಕಾ ಪಡುಕೋಣೆ ಮಾತನಾಡಿದ್ದರು. ತಾವು ಆ ಖಿನ್ನತೆಯನ್ನು ಎದುರಿಸಿದ ಹಿನ್ನೆಲೆ ಮತ್ತು ಅದರಿಂದ ಆಚೆ ಬರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಲಹೆ ನೀಡಿದ್ದರು. ಇದೀಗ ಅದೇ ವಿಚಾರ ದೀಪಿಕಾ ಉರುಳಾಗಿ ಪರಿಣಮಿಸಿದೆ.