Breaking News

ರಾಜ್ಯಾದ್ಯಂತ ರೈತರು ಬೃಹತ್​ ಪ್ರತಿಭಟನೆ : ಗೊರಗುಂಟೆ ಪಾಳ್ಯ ರಾಷ್ಟ್ರೀಯ ಹೆದ್ದಾರಿ ಬಂದ್

Spread the love

ಬೆಂಗಳೂರು: ಕೃಷಿ ಮಸೂದೆಗಳನ್ನ ವಿರೋಧಿಸಿ ಇಂದು ಭಾರತ್​ ಬಂದ್​​ಗೆ ಕರೆ ನೀಡಿರೋ ಹಿನ್ನೆಲೆ ಇಂದು ರಾಜ್ಯಾದ್ಯಂತ ರೈತರು ಬೃಹತ್​ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆ ರೈತ ಸಂಘದ ಅಧ್ಯಕ್ಷ ಗಿರೀಶ್​ಗೌಡ ನೇತೃತ್ವದಲ್ಲಿ ಗೊರಗುಂಟೆ ಪಾಳ್ಯ ರಾಷ್ಟ್ರೀಯ ಹೆದ್ದಾರಿ ಬಂದ್​ ಮಾಡಿ ಪ್ರತಿಭಟಿಸಲಾಯ್ತು.

20 ನಿಮಿಷಗಳ ಕಾಲ ರಸ್ತೆ ತಡೆ ಮಾಡಲು ಪೊಲೀಸರು ಅನುಮತಿ ನೀಡಿದ್ದರು. ತುಮಕೂರು- ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಈ ರಸ್ತೆಯನ್ನ ಗೊರಗುಂಟೆ ಪಾಳ್ಯದ ಸಿಗ್ನಲ್ ಬಳಿ ಬೆಳಗ್ಗೆ 8.30ರಿಂದ, 20 ನಿಮಿಷದ ಕಾಲ ಬಂದ್​ ಮಾಡಲಾಯ್ತು.

ಇದರಿಂದ ಕನಕಪುರ, ಬನಶಂಕರಿ, ಬನ್ನೇರುಘಟ್ಟ, ಸುಮನಹಳ್ಳಿ ಕಡೆಗೆ ಹೋಗೊ ರಸ್ತೆಗಳು, ಬೆಂಗಳೂರು ಹೃದಯ ಭಾಗಗಳಾದ ಮೆಜೆಸ್ಟಿಕ್​, ಲಾಲ್​​ಬಾಗ್ ,ಮಲೇಶ್ವರಂ, ಶಿವಾಜಿನಗರ ಕಡೆಗೆ ಸಂಪರ್ಕ ಕಲ್ಪಿಸೋ ರಸ್ತೆಗಳಲ್ಲಿ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ