Breaking News

ಧರಣಿ ನಿರತ ಬೀದಿ ವ್ಯಾಪಾರಾಸ್ಥರಿಗೆ ನಗರಸಭೆ ಮುಖ್ಯಾಧಿಕಾರಿ ಶಿವಾನಂದ ಹಿರೇಮಠ ಅವರಿಂದ ಭರವಸೆ

Spread the love

ಗೋಕಾಕ: ಧರಣಿ ನಿರತ ಬೀದಿ ವ್ಯಾಪಾರಾಸ್ಥರಿಗೆ ನಗರಸಭೆ ಮುಖ್ಯಾಧಿಕಾರಿ ಶಿವಾನಂದ ಹಿರೇಮಠ ಸೂಕ್ತ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.

ನಗರಸಭೆ ಕಚೇರಿಯಲ್ಲಿ ಪ್ರತಿಭಟನಾನಿರತ ವ್ಯಾಪಾರಸ್ಥರ ಮನವೊಲಿಸಿದ ಮುಖ್ಯಾಧಿಕಾರಿ, ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿ ನಿಮ್ಮ ವ್ಯಾಪಾರ ಸುಗಮವಾಗಿ ನಡೆಸಲು ಅವಕಾಶ ಮಾಡಿಕೊಡುತ್ತೇನೆ ಸೂಕ್ತ ಭರವಸೆ ನೀಡಿದರು.

ಪಾರ್ಕಿಂಗ್ ವ್ಯವಸ್ಥೆಯಿಂದ ಹೀಗಾಗಿರಬೇಕು ಎಂದು ಸಮಜಾಯಷಿ ಹೇಳಿದ ಇನ್ನೆರಡು ದಿನಗಳಲ್ಲಿ ಎಲ್ಲ ಸರಿಪಡುತ್ತೇನೆ ಎಂದರು. ಕೊರೋನಾ ವಿರುದ್ಧ ಹೋರಾಟಕ್ಕೆ ನಿಮ್ಮ ಸಹಕಾರವು ಅಗತ್ಯವಿದೆ. ನೀವು ಜನದಟ್ಟಣೆ ಆಗದಂತೆ ಕ್ರಮವಹಿಸಿ ಮತ್ತು ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ವ್ಯಾಪಾರಸ್ಥರಿಗೆ ತಿಳಿ ಹೇಳಿದರು.

ಮುಖ್ಯಾಧಿಕಾರಿಗಳ ಭರವಸೆ ಬಳಿಕ ಧರಣಿ ವ್ಯಾಪಾರಸ್ಥರು ಪ್ರತಿಭಟನೆ ಹಿಂಪಡೆದರು.


Spread the love

About Laxminews 24x7

Check Also

1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು.

Spread the love1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು. ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ