Breaking News
Home / ಜಿಲ್ಲೆ / ನಾಳೆ ಜನತಾ ಕರ್ಫ್ಯೂನಲ್ಲಿ ಏನೆಲ್ಲಾ ಬಂದ್ ಇರುತ್ತೆ

ನಾಳೆ ಜನತಾ ಕರ್ಫ್ಯೂನಲ್ಲಿ ಏನೆಲ್ಲಾ ಬಂದ್ ಇರುತ್ತೆ

Spread the love

ಬೆಂಗಳೂರು : ಮಾರ್ಚ್ 22ರ ಭಾನುವಾರದಂದು (ನಾಳೆ) ಪ್ರಧಾನಿ ನರೇಂದ್ರ ಮೋದಿಯವರು ಜನತಾ ಕರ್ಪ್ಯೂಗೆ ಕರೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಬಹುತೇಕ ಜನರು ಅಂದು ಸ್ವಯಂ ಗೃಹ ಬಂಧನಕ್ಕೆ ಒಳಗಾಗಲಿದ್ದಾರೆ. ಬೆಳಿಗ್ಗೆಯಿಂದ ಸಂಜೆಯವರೆಗೆ ಮನೆಯಿಂದ ಹೊರಗೆ ಬಾರದೇ ಪ್ರಧಾನಿಯವರ ಜನತಾ ಕರ್ಪ್ಯೂಗೆ ಬೆಂಬಲ ಸೂಚಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದೆಲ್ಲೆಡೆ ಏನೆಲ್ಲಾ ವ್ಯವಸ್ಥೆ ಇರೋದಿಲ್ಲ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ..

ಮಾರ್ಚ್ 22ರ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯವರು ಜನತಾ ಕರ್ಪ್ಯೂಗೆ ಕರೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಪ್ರಧಾನಿ ಕರೆಗೆ ಮಹತ್ವದ ಸ್ಪಂದನೆ ವ್ಯಕ್ತವಾಗಿದೆ. ಪ್ರಧಾನಿಯವರ ಜನತಾ ಕರ್ಪ್ಯೂ ಹಿನ್ನಲೆಯಲ್ಲಿ ಈ ಕೆಳಗಿನ ಸೇವಗಳು ಬಂದ್ ಆಗಲಿವೆ.
*ನಮ್ಮ ಮೆಟ್ರೋ ಸೇವೆ ಸ್ಥಗಿತ
*ಕೆ ಎಸ್ ಆರ್ ಟಿ ಸಿ ಬಸ್ ಸೇವೆ ಲಭ್ಯವಿಲ್ಲ
*ಹೋಟೆಲ್ ನಲ್ಲಿ ಊಟ ಸಿಗೋದಿಲ್ಲ
*ಆಭರಣ ಮಳಿಗೆಗಳು ಬಂದ್
*ಪೆಟ್ರೋಲ್, ಡಿಸೇಲ್ ಬಂಕ್ ಗಳು ಬಂದ್
*ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಗಳ ಸಂಚಾರ ಸ್ಥಗಿತ
*ಬಾರ್, ಪಬ್, ರೆಸ್ಟೋರೆಂಟ್ ಗಳು ಓಪನ್ ಇರೋದಿಲ್ಲ
*ಬೆಂಗಳೂರಿನ ಪ್ರಮುಖ ಕೆ ಆರ್ ಮಾರುಕಟ್ಟೆ ಕ್ಲೋಸ್
*ಬಿಎಂಟಿಸಿ ಬಸ್ ಗಳು ಶೇ.20ರಷ್ಟು ಮಾತ್ರ ಸಂಚರಿಸಲಿವೆ
*ದೇವಾಲಯಗಳು ಬಂದ್
*ಆಟೋ, ಟ್ಯಾಕ್ಸಿ ಸೇವೆ ಕೂಡ ಬಹುತೇಕ ಸ್ಥಬ್ಧ
ಕೈಗಾರಿಕೆಗಳು ಬಂದ್
ಇನ್ನೂ ಈ ಎಲ್ಲಾ ವ್ಯವಸ್ಥೆಗಳಲ್ಲಿ ವ್ಯತ್ಯವಾದ್ರೇ.. ಅಗತ್ಯ ವಸ್ತುಗಳ ತುರ್ತು ಸೇವೆ ಲಭ್ಯವಾಗಲಿದೆ. ಮೆಡಿಕಲ್, ಆಸ್ಪತ್ರೆಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಇದರ ಹೊರತಾಗಿ ಇತರೇ ಸೇವೆಗಳು ಬಂದ್ ಆಗಲಿದ್ದು, ಬಹುತೇಕ ಇಡೀ ದೇಶವೇ ಸ್ಥಬ್ಧವಾಗಲಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಜನತಾ ಕರ್ಪ್ಯೂಗೆ ಬೆಂಬಲ ವ್ಯಕ್ತವಾಗುವ ಮೂಲಕ, ಕೊರೊನಾ ವೈರಸ್ ತಡೆಗೆ ದೇಶದವಲ್ಲದೇ ರಾಜ್ಯದಲ್ಲೂ ಬೆಂಬಲ ವ್ಯಕ್ತವಾಗಲಿದೆ.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ