Breaking News

ಇಂದು ರಾಜ್ಯದಲ್ಲಿ `ಸಂಡೇ ಕರ್ಪ್ಯೂ’ : ಏನಿರುತ್ತೆ? ಏನಿರಲ್ಲ?

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯ್ಲಿ ರಾಜ್ಯ ಸರ್ಕಾರವು ಭಾನುವಾರ ಸಂಪೂರ್ಣ ಲಾಕ್ ಡೌನ್ ಗೆ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗಿನ ಜಾವ 5 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ.

ಈಗಾಗಲೇ ಪ್ರತಿದಿನ ರಾತ್ರಿ 8 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ಕರ್ಪ್ಯೂ ಜಾರಿಯಲ್ಲಿದೆ. ಲಾಕ್ ಡೌನ್ ವೇಳೆ ಸುಖಾಸುಮ್ಮನೆ ಮನೆಯಿಂದ ಹೊರಬಂದರೆ ಮುಲಾಜಿಲ್ಲದೆ ಪೊಲೀಸರು ಕೇಸ್ ದಾಖಲಿಸಿ ದಂಡ ವಿಧಿಸಲಿದ್ದಾರೆ. ಸರಕು ಸಾಗಣಿ ಮತ್ತು ತುರ್ತು ಸೇವೆ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವಿರಲಿದೆ.

ಏನಿರುತ್ತೆ?

ಆಸ್ಪತ್ರೆ , ಮೆಡಿಕಲ್ ಶಾಪ್ , ದಿನಸಿ ಅಂಗಡಿ , ಹೋಟೆಲ್ ನಲ್ಲಿ ಪಾರ್ಸೆಲ್ , ತರಕಾರಿ ಅಂಗಡಿ , ಮಾಂಸದಂಗಡಿ , ಹಾಲು ಮತ್ತು ಪೊಲೀಸ್ , ವೈದ್ಯಕೀಯ ಮಾಧ್ಯಮ ಸೇವೆ ಸಿಗಲಿದೆ .

ಏನಿರಲ್ಲ ?

ಕೆಎಸ್ ‌ ಆರ್ ಟಿಸಿ , ಕ್ಯಾಬ್ , ಆಟೋ ಸೇವೆ ಇರುವುದಿಲ್ಲ , ಜೊತೆಗ ವಾಣಿಜ್ಯ ಮಳಿಗೆ ಇನ್ನಿತರ ಅಂಗಡಿಗಳು ಸಂಪೂರ್ಣ ಬಂದ್ ಆಗಿರಲಿವೆ .


Spread the love

About Laxminews 24x7

Check Also

ಭವಿಷ್ಯ ಹೇಳುತ್ತಿರುವ ಆರ್. ಅಶೋಕ ಬಳಿ ನಾನು ಕೂಡ ಭವಿಷ್ಯ ಕೇಳಲು ಹೋಗಿ ಬರ್ತೇನೆ: ಡಿ.ಕೆ. ಶಿವಕುಮಾರ್

Spread the loveಬೆಂಗಳೂರು: ನನಗೂ ಜ್ಯೋತಿಷ್ಯ ಶಾಸ್ತ್ರದ ಚಟವಿದೆ. ಆರ್. ಅಶೋಕ ಬೋರ್ಡ ಹಾಕಿಕೊಂಡಿದ್ದಾರೆ. ಸ್ವಲ್ಪ ಸಮಯ ತೆಗೆದುಕೊಂಡು ತಾವೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ