Breaking News

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗರಂ ಆಗಿರುವ ಮೇಯರ್​ ತಸ್ನೀಂ ಬಾನು

Spread the love

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗರಂ ಆಗಿರುವ ಮೇಯರ್​ ತಸ್ನೀಂ ಬಾನು, ರೋಹಿಣಿ ಅವರು ಶಿಷ್ಟಾಚಾರ ಉಲ್ಲಂಘನೆ ಮಾಡುತ್ತಿದ್ದಾರೆಂದು ಆರೋಪಿಸಿ, ಶಿಷ್ಟಾಚಾರ ಪಾಲನೆಯ ಪಾಠ ಮಾಡಿದ್ದಾರೆ.

ದಸರಾ ಉದ್ಘಾಟನೆಗೆ ಮುಖ್ಯಮಂತ್ರಿಯವರಿಗೆ ಸ್ವಾಗತ ನೀಡುವಾಗ ಮೈಸೂರಿನ ಪ್ರಥಮ ಪ್ರಜೆಗೂ ಅವಕಾಶ ನೀಡಬೇಕು. ಆದರೆ, ಮೇಯರ್ ಅವರನ್ನು ಒಳಗೆ ಬಿಡದಂತೆ ಜಿಲ್ಲಾಧಿಕಾರಿ, ಪೋಲೀಸರಿಗೆ ಹೇಳುತ್ತಾರೆ. ಉದ್ಘಾಟನೆ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪಕ್ಕದಲ್ಲಿ ನಮ್ಮ ಆಸನ ಇಡಬೇಕು. ಆದರೆ, ಕೊನೆಯಲ್ಲಿ ನಮಗೆ ನೀಡುತ್ತೀರಿ ಎಂದು ದೂರಿದರು.ಸ್ವಾಗತ ಮಾಡುವಾಗಲೂ ಉಪಮಹಾಪೌರರು ಹಾಗೂ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಿಗೆ ಮಾತ್ರ ಸ್ವಾಗತ ಕೋರುವುದಿಲ್ಲ‌ ಏಕೆಯಾರ ಮನವೊಲಿಸಲು ಈ ಕೆಲಸ ಮಾಡುತ್ತಿದ್ದೀರಿ? ಎಂದು ಪ್ರಶ್ನಿಸಿ, ರೋಹಿಣಿ ಸಿಂಧೂರಿಗೆ ವಿರುದ್ಧ ಮೇಯರ್ ತಸ್ನಿಂ ಕಿಡಿಕಾರಿದರು.


Spread the love

About Laxminews 24x7

Check Also

ರಾಜ್ಯದಲ್ಲಿರೋದು ಬ್ರೋಕರ್‌ಗಳ ಸರ್ಕಾರ – ಹೆಚ್‌ಡಿಕೆ ವಾಗ್ದಾಳಿ

Spread the love ಹಾಸನ: ಈ ರಾಜ್ಯದ ಮುಖ್ಯಮಂತ್ರಿಗಳು ಅಹಿಂದ ಮುಂದಿಟ್ಟು ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದ್ದಾರೆ. ಈ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ