Breaking News
Home / ಜಿಲ್ಲೆ / ತಾನೇ ಸಾಕಿದ್ದ ಹಸುವಿನಿಂದ ಬಾಲಕ ಪ್ರಾಣಬಿಟ್ಟಿದ್ದಾನೆ

ತಾನೇ ಸಾಕಿದ್ದ ಹಸುವಿನಿಂದ ಬಾಲಕ ಪ್ರಾಣಬಿಟ್ಟಿದ್ದಾನೆ

Spread the love

ಮಂಡ್ಯ: ತಾನೇ ಸಾಕಿದ್ದ ಹಸು ಮುಂದೊಂದ್ದು ದಿನ ತನ್ನನ್ನೇ ಕೊಲ್ಲಬಹುದು ಎಂದು ಆ ಬಾಲಕ ಕನಸ್ಸಿನಲ್ಲೂ ಯೋಚಿಸಿರಲಿಲ್ಲ. ಆದರೆ ವಿಧಿಲಿಖಿತ ಅದೇ ಆಗಿತ್ತು. ಆ ಹಸುವಿನಿಂದಲೇ ಬಾಲಕ ಪ್ರಾಣಬಿಟ್ಟಿದ್ದಾನೆ.

ಇಂತಹದ್ದೊಂದು ಮನಕಲಕುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಯತ್ತಂಬಾಡಿ ಗ್ರಾಮದಲ್ಲಿ ಸಂಭವಿಸಿದ್ದು, 13 ವರ್ಷದ ಬಾಲಕ ಮಾದೇಶ್ (13) ಬಲಿಯಾಗಿದ್ದಾನೆ. ಸೋಮವಾರ ರಾತ್ರಿ ಹಸುವಿಗೆ ಹುಲ್ಲು ಹಾಕಲು ಹೋಗಿದ್ದ ಮಾದೇಶ್​ಗೆ ಕೊಂಬಿನಿಂದ ತಿವಿದಿದೆ. ಮಾರಣಾಂತಿಕವಾಗಿ ಗಾಯಗೊಂಡ ಬಾಲಕ ತೀವ್ರ ರಕ್ತಸ್ರಾವವಾಗಿ ಅಸುನೀಗಿದ್ದಾನೆ.ಮನೆಯಲ್ಲೇ ಸಾಕಿದ್ದ ಹಸುಗೆ ಮನೆಮಗ ಬಲಿಯಾಗಿರುವುದು ಇಡೀ ಕುಟುಂಬವನ್ನು ಶೋಕದಲ್ಲಿ ಮುಳುಗಿಸಿದೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ