Breaking News

ಕೊರೊನಾ ಮಹಾಮಾರಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಮದ್ಯ ಮಾರಾಟವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಕನ್ನಡ ಸೇನೆ ಕಾರ್ಯಕರ್ತರು ಮನವಿ ಪತ್ರ ಸಲ್ಲಿಸಿದರು.

Spread the love

 

 

ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಮಿನಿ ವಿಧಾನಸೌಧದ ತಾಲೂಕು ಕಚೇರಿಗೆ ತೆರಳಿದ ಕನ್ನಡ ಸೇನೆ ಕಾರ್ಯಕರ್ತರು ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಸಿ ಮದ್ಯ ಮಾರಾಟ ಸ್ಥಗಿತಕ್ಕೆ ಆಗ್ರಹಿಸಿದರು.

ಕನ್ನಡ ಸೇನೆ ಜಿಲ್ಲಾ ಉಪಾಧ್ಯಕ್ಷ ಮಂಡಿಬೆಟ್ಟಹಳ್ಳಿ ಎಂ.ಎಸ್.ಮಂಜುನಾಥ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಕಾರ್ಯಕರ್ತರು.

ಮದ್ಯ ಮಾರಾಟದ ಜತೆಗೆ ಗುಟ್ಕಾ ಮಾರಾಟಕ್ಕೂ ಸರ್ಕಾರ ಆದೇಶ ಮಾಡಿರುವುದು ಸರಿಯಲ್ಲ. ತಕ್ಷಣ ಮಾರಾಟ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಕನ್ನಡ ಸೇನೆ ತಾಲೂಕು ಅಧ್ಯಕ್ಷ ಸಿ.ದೇವಾ, ಉಪಾಧ್ಯಕ್ಷ ಸೋಮಶೇಖರ್, ಜನಜಾಗೃತಿ ವೇದಿಕೆ ಅಧ್ಯಕ್ಷೆ ಹಾರೋಹಳ್ಳಿ ಎನ್.ಇಂದ್ರಮ್ಮ ಇತರರಿದ್ದರು.


Spread the love

About Laxminews 24x7

Check Also

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯದ ಐತಿಹಾಸಿಕ ತೀರ್ಪು

Spread the love ಬೆಳಗಾವಿ ನಗರವನ್ನು ಬೆಚ್ಚಿಬೀಳಿಸಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತೀರ್ಪು ಇಂದು ಪ್ರಕಟವಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ