Breaking News

ಆಧಾರ್ ಕಾರ್ಡ್ ಇದ್ದರೆ ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ : ರಾಜ್ಯ ಸರ್ಕಾರ ಸುತ್ತೋಲೆ

Spread the love

ಬೆಂಗಳೂರು : ರಾಜ್ಯ ಸರ್ಕಾರವು ಜಲ ನೀತಿ ಅನ್ವಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್ಲ ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ ಪಡೆಯಲು ನಿಯಮಗಳಲ್ಲಿ ಸರಳೀಕರಣ ಮಾಡಿ ಸುತ್ತೋಲೆ ಹೊರಡಿಸಿದೆ.

ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ ಪಡೆಯಲು ಸೂಕ್ತ ದಾಖಲೆಗಳು ಇಲ್ಲದಿದ್ದರೆ ಆಧಾರ್ ಕಾರ್ಡ್ ಮತ್ತು ನಷ್ಟ ಭರ್ತಿ ಮುಚ್ಚಳಿಕೆ ಪಡೆದು ನಳ ಸಂಪರ್ಕ ಕಲ್ಪಿಸುವಂತೆ ಸೂಚಿಸಲಾಗಿದೆ. ಎಲ್ಲ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರು ಕೈಗಟಕುವ ದರದಲ್ಲಿ ಕೊಳವೆ ಸಂಪರ್ಕದ ಮೂಲಕ ಒದಗಿಸುವುದ ಸರ್ಕಾರದ ಉದ್ದೇಶವಾಗಿದೆ.

ಮನೆಗಳಿಗೆ ಕುಡಿಯುವ ನೀರು ಸಂಪರ್ಕ ಪಡೆಯಲು ನಷ್ಟ ಭರ್ತಿ ಮುಚ್ಚಳಿಕೆಯನ್ನು ನಿಗದಿತ ನಮೂನೆಗಳಲ್ಲಿ 50 ರೂ. ಸ್ಟಾಂಪ್ ಪೇಪರ್ ನಲ್ಲಿ ವಿಳಾಸದ ಪುರಾವೆಯೊಂದಿಗೆ ಅರ್ಜಿ ಸಲ್ಲಿಸಬೇಕು. ಮಾಲೀಕತ್ವ ಇಲ್ಲದವರು ನಗರ ಸ್ಥಳೀಯ ಸಂಸ್ಥೆಗೆ ಯಾವುದೇ ನಷ್ಟ ಉಂಟಾದರೆ ಅರ್ಜಿದಾರರೇ ಆ ನಷ್ಟವನ್ನು ಭರ್ತಿ ಮಾಡುತ್ತೇವೆಂದು ಮುಚ್ಚಳಿಕೆ ನೀಡಬೇಕು ಎಂದು ರಾಜ್ಯ ಸರ್ಕಾರ ತಿಳಿಸಿದೆ.


Spread the love

About Laxminews 24x7

Check Also

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Spread the loveನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ