Breaking News
Home / ಜಿಲ್ಲೆ / ರಾಮನಗರ / ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ.

ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ.

Spread the love

ರಾಮನಗರ : ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿಯಿಂದ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ.

ಅಕ್ಟೋಬರ್​ 8 ರಂದು ಮನೆಯಿಂದ ಕಾಣೆಯಾಗಿದ್ದ 19 ವರ್ಷದ ಯುವತಿ ಹೇಮಲತಾಳ ಮೃತದೇಹ ಇಂದು  ಪತ್ತೆಯಾಗಿದೆ.

ಯುವತಿ ಕಾಣೆಯಾದ ಬೆನ್ನಲ್ಲೇ ಅಕ್ಟೋಬರ್ 9 ರಂದು ಕುದೂರು ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲಾಗಿತ್ತು. ಇದೀಗ ಹೇಮಲತಾಳ ಮೃತದೇಹ ಆಕೆಯ ಮನೆಯ ಸಮೀಪವೇ ಇದ್ದ ಜಮೀನಿನಲ್ಲಿ ಪತ್ತೆಯಾಗಿದೆ.

ಯುವತಿಯ ದೊಡ್ಡಪ್ಪ ರವೀಂದ್ರಕುಮಾರ್ ಜಮೀನಿನಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. ಯುವತಿಯ ಬಟ್ಟೆಗಳನ್ನ ಬೇರೆಡೆ ಎಸೆದ ನಂತರ ದುಷ್ಕರ್ಮಿಗಳು ಆಕೆಯನ್ನು ಕೊಲೆ ಮಾಡಿ ಮಣ್ಣಿನಲ್ಲಿ ‌ಹೂತು ಹಾಕಿದ್ದಾರೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದು, ಸದ್ಯ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮಳೆ: ಮೈಸೂರು ಬೆಂಗಳೂರು ಹೆದ್ದಾರಿಯ ಬಸವನಪುರ ಅಂಡರ್ ಪಾಸ್‌ನಲ್ಲಿ ನಿಂತ ನೀರು

Spread the love ರಾಮನಗರ: ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ಉತ್ತಮ ಮಳೆ ಸುರಿದಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಬಸವನಪುರ ಅಂಡರ್ ಪಾಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ