Breaking News

ರಾಯಚೂರು :ಕೋವಿಡ್ 19 ದೃಢ ಹೆಡ್ ಕಾನ್‌ಸ್ಟೇಬಲ್‌ ರಾಘವೇಂದ್ರ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತ

Spread the love

ರಾಯಚೂರು: ಕೋವಿಡ್ ದೃಢವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಗ್ರಾಮೀಣ ಠಾಣೆಯ ಹೆಡ್ ಕಾನ್‌ಸ್ಟೇಬಲ್‌ ರಾಘವೇಂದ್ರ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರು ಗ್ರಾಮೀಣ ಠಾಣೆಗೆ ಭೇಟಿಕೊಟ್ಟರು. ಇದೇ ವೇಳೆ ರಾಘವೇಂದ್ರ ಅವರಿಗೆ ಪೊಲೀಸರು ಶ್ರದ್ಧಾಂಜಲಿ ಸಲ್ಲಿಸಿದರು.

‘ರಾಘವೇಂದ್ರ ಅವರು ಸಹೃದಯಿ. ಎಲ್ಲರನ್ನು ಪ್ರೀತಿಯಿಂದ ಮಾತನಾಡಿಸುತ್ತಿದ್ದರು ಕರ್ತವ್ಯದಲ್ಲಿ ಪ್ರಾಮಾಣಿಕತೆ, ನಿಷ್ಠೆಯಿಂದ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಇಂತಹ ವ್ಯಕ್ತಿಯ ಮರಣ ನಿಜಕ್ಕೂ ಇಲಾಖೆಗೆ ನೋವುಂಟು ಮಾಡಿದೆ’ ಎಂದು ಡಾ.ವೇದಮೂರ್ತಿ ತಿಳಿಸಿದರು.

‘ಸಿಬ್ಬಂದಿ ಹೆದರುವ ಅವಶ್ಯಕತೆ ಇಲ್ಲ. ಕೊರೊನಾ ಸೋಂಕು ಹರಡದಂತೆ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಿ’ ಎಂದು ಹೇಳಿದರು.ರಾಘವೇಂದ್ರ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಹಾಗೂ ಮಧುಮೇಹ ಕಾಯಿಲೆಗಳು ಇದ್ದವು.


Spread the love

About Laxminews 24x7

Check Also

ಕೇತುಗ್ರಸ್ಥ ಚಂದ್ರಗ್ರಹಣ – ಮಂತ್ರಾಲಯ ರಾಯರ ಮಠದಲ್ಲಿ ಭಕ್ತರ ದರ್ಶನಕ್ಕಿಲ್ಲ ಅಡ್ಡಿ

Spread the loveರಾಯಚೂರು: ಕೇತುಗ್ರಸ್ಥ ಚಂದ್ರಗ್ರಹಣ  ನಡುವೆಯೂ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ದರ್ಶನಕ್ಕೆ ಯಾವುದೇ ನಿರ್ಬಂಧವಿಲ್ಲ. ಎಂದಿನಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ