ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರ ಮಾಲೀಕತ್ವದ ಸತೀಶ ಶುಗರ್ಸ್ ವತಿಯಿಂದ ಸ್ಯಾನಿಟೈಜರ್ ಬಾಟಲಗಳನ್ನು ವಿತರಿಸಲಾಯಿತು.
ಗೋಕಾಕ ಮತ್ತು ಯಮಕನಮರಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಈ ಬಾಟಲಗಳನ್ನು ವಿತರಿಸಲಾಗುವುದು.
ಶಾಸಕ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು , ಪೌರ ಕಾರ್ಮಿಕರು ಮತ್ತು ಪೊಲಿಸ್ ಸಿಬ್ಬಂದಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಸ್ಯಾನಿಟೈಜ್ ಬಾಟಗಳನ್ನು ವಿತರಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ರಾಹುಲ ಜಾರಕಿಹೊಳಿ, ಮಾಜಿ ಸಚಿವ ವೀರಕುಮಾರ ಪಾಟೀಲ, ರಾಜು ದರಗಶೆಟ್ಟಿ, ಪ್ರಕಾಶ ಬಾಗೇವಾಡಿ,ವಿಠ್ಠಲ ಪರಸಣ್ಣವರ, ಅರವಿಂದ ಕಾರ್ಚಿ, ಮಾರುತಿ ಗುಟಗುದ್ದಿ, ಆರೀಪ ಪೀರಜಾದೆ, ಪ್ರಕಾಶ ಬಸ್ಸಾಪುರೆ ಇದ್ದರು.