Home / ಜಿಲ್ಲೆ / ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ವತಿಯಿಂದ ಬಡ ಕುಟುಂಬದವರಿಗೆ ದಿನ ಬಳಕೆಗೆ ಬೇಕಾದ ದಿನಸಿ ಸಾಮಗ್ರಿಗಳ ವಿತರಣೆ

ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ವತಿಯಿಂದ ಬಡ ಕುಟುಂಬದವರಿಗೆ ದಿನ ಬಳಕೆಗೆ ಬೇಕಾದ ದಿನಸಿ ಸಾಮಗ್ರಿಗಳ ವಿತರಣೆ

Spread the love

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕುಟುರನಟ್ಟಿ ಗ್ರಾಮದಲ್ಲಿ 300 ಕ್ಕೂ ಹೆಚ್ಚು ಬಡ ಕುಟುಂಬಗಳಿಗೆ ಬೇಕಾದ ಆಹಾರ ಕಿಟ್ ಗಳನ್ನು ಅಖಿಲ ಕರ್ನಾಟಕ ವಿಶ್ವ ಕರ್ಮ ಸಮಿತಿಯ ರಾಜ್ಯ ಪ್ರದಾನ ಕಾರ್ಯದರ್ಶಿಯಾದ ಸುರೇಶ ಪತ್ತಾರ ರವರು ವಿತರಿದರು.
ಮಾತನಾಡಿ ನಮ್ಮ ಸಮಿತಿಯಿಂದ ಪ್ರತಿ ಹಳ್ಳಿ ಹಳ್ಳಿಗೂ ವಿಷಯ ತಿಳಿದು ಕೊಂಡು ಬಡ ಕುಟುಂಬಗಳಿಗೆ ದಿನಸಿ ಸಾಮಗ್ರಿಗಳು ಪೂರೈಸಲು ಮುಂದಾಗಿದ್ದು. ಕುಟುರನಟ್ಟಿ ಗ್ರಾಮಸ್ಥರಿಗೆ ಸರ್ಕಾರದಿಂದ ಸರಿಯಾಗಿ ಸೌಲಭ್ಯಗಳು ದೊರೆತಾಯಿಲ್ಲ.ಆದುದರಿಂದ ದಯಮಾಡಿ ಈ ಗ್ರಾಮಕ್ಕೆ ಆಶಾ,ಅಂಗನವಾಡಿ ಕಾರ್ಯಕರ್ತೆಯರನ್ನು ಕಳುಹಿಸಿ ಸಂಪೂರ್ಣ ಮಾಹಿತಿ ಪಡೆದು ಸೌಲಭ್ಯಗಳನ್ನು ದೊರಕಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಿತಿಯ ರಾಜ್ಯ ಉಪಾಧ್ಯಕ್ಷ ಸಿದ್ದಾರೋಡ ಬಡಿಗೇರ, ಮಹೇಶ ಪತ್ತಾರ,P D O ಗುರುಪಾದ ಗಿರೆನ್ನವರ,ಗ್ರಾಮ ಲೆಕ್ಕಾಧಿಕಾರಿ S S ಮಾಳಗಿ,M M ಮಾವುತ ಕಂದಾಯ ನಿರೀಕ್ಷರು ಮುರಗೋಡ,ಆನಂತ ಪತ್ತಾರ, ಶಿವಾನಂದ ಪತ್ತಾರ, ರಮೇಶ ಖಾನಪ್ಪನವರ,ಮುನ್ನಾ,ಸಿದ್ದು ಖಾನಪ್ಪನವರ, ಮತ್ತು ಕುಟುರನಟ್ಟಿ ಪಂಚಾಯತ ಸದಸ್ಯರು, ಸಮಿತಿಯ ಸರ್ವ ಸದಸ್ಯರು ಹಾಜರಿದ್ದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ