Breaking News
Home / ಕೊರೊನಾವೈರಸ್ / ಶಿವಯೋಗಿ ಮಠದ ಪರಮ ಪೂಜ್ಯ ಹಾಲಸ್ವಾಮಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಶಿವಯೋಗಿ ಮಠದ ಪರಮ ಪೂಜ್ಯ ಹಾಲಸ್ವಾಮಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

Spread the love

ಶಿವಮೊಗ್ಗ : ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ರಾಂಪುರದ ಶಿವಯೋಗಿ ಮಠದ ಪರಮ ಪೂಜ್ಯ ಹಾಲಸ್ವಾಮಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಹಲವು ದಿನಗಳಿಂದ ತೀವ್ರ ತರ ಉಸಿರಾಟದ ತೊಂದರೆಯಿಂದ ನರಳುತ್ತಿದ್ದರು. ಭಕ್ತರು ಎಷ್ಟೇ ವಿನಂತಿಸಿದರೂ ಆಸ್ಪತ್ರೆಗೆ ಹೋಗಲು ನಿರಾಕರಿಸಿದ್ದರು. ಕೊನೆಗೆ ಎರಡು ದಿನಗಳ ಹಿಂದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಕೋವಿಡ್‌ ಕೇಂದ್ರಕ್ಕೆ ಕರೆತರಲಾಗಿತ್ತು.

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದಾವಣಗೆರೆ ಜಿಲ್ಲೆ ಸಾಸ್ವೆಹಳ್ಳಿ ಸಮೀಪದ ರಾಂಪುರ ಮಹಾಸಂಸ್ಥಾನದ ಹಾಲಸ್ವಾಮಿ ಅವರಿಗೆ ಕೆಲ ದಿನಗಳ ಹಿಂದೆ ಕೊರೋನಾ ಸೋಂಕು ದೃಢಪಟ್ಟಿತ್ತು. ಸೋಂಕಿಗೆ ತುತ್ತಾಗಿದ್ದ ಶ್ರೀಗಳು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು.
ಆದ್ರೆ, ಚಿಕಿತ್ಸೆ ಫಲಿಸದೆ‌  ಹಾಲಸ್ವಾಮಿಜೀ ಶಿವೈಕ್ಯರಾಗಿದ್ದಾರೆ.

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ಹೋಗುವಂತೆ ಭಕ್ತರು ಮನವಿ ಮಾಡಿದರೂ ಒಪ್ಪಿರಲಿಲ್ಲ. ಆದರೆ ಎರಡು ದಿನಗಳ ಹಿಂದಷ್ಟೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ.

ಹಾಲಸ್ವಾಮೀಜಿ ಅವರನ್ನು ಆ ಭಾಗದ ಭಕ್ತರು ಪವಾಡ ಪುರುಷ ಎಂದೇ ನಂಬಿದ್ದರು. ದಾವಣಗೆರೆ, ಶಿವಮೊಗ್ಗ ಮಾತ್ರವಲ್ಲದೆ ಹಲವೆಡೆ ಅಪಾರ ಭಕ್ತ ಸಮೂಹವನ್ನು ಅವರು ಹೊಂದಿದ್ದರು.


Spread the love

About Laxminews 24x7

Check Also

ಡ್ರೋನ್​ ಮೂಲಕ ಜಿಲ್ಲೆಯಲ್ಲಿ ‘ಮರು ಭೂ ಮಾಪನ ಯೋಜನೆ’

Spread the love ಗದಗ : ಡ್ರೋನ್​ ಮೂಲಕ ಜಿಲ್ಲೆಯಲ್ಲಿ ‘ಮರು ಭೂ ಮಾಪನ ಯೋಜನೆ’ (ವೈಮಾನಿಕ ಭೂ ಸಮೀಕ್ಷೆ)ಗೆ ಚಾಲನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ