Breaking News
Home / ಜಿಲ್ಲೆ / ಚಿಕ್ಕ ಮಂಗಳೂರು / ಕೆಲಸದ ವೇಳೆ ಆತ್ಮ ಹತ್ಯೆಗೆ ಶರಣಾದ ಯುವ

ಕೆಲಸದ ವೇಳೆ ಆತ್ಮ ಹತ್ಯೆಗೆ ಶರಣಾದ ಯುವ

Spread the love

ನೆಲಮಂಗಲ: ಖಾಸಗಿ ಆಸ್ಪತ್ರೆ ಸಿಬ್ಬಂದಿಯೊಬ್ಬರು ಎರಡು ಮಾದರಿಯ ಚುಚ್ಚುಮದ್ದುಗಳನ್ನು ಸಮೀಕರಿಸಿಕೊಂಡು ಸ್ವತಃ ಇಂಜೆಕ್ಷನ್‌ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಟ್ಟಣದ ಕುಣಿಗಲ್‌ ವೃತ್ತದ ಬಳಿಯಲ್ಲಿರುವ ಆಸ್ಪತ್ರೆಯಲ್ಲಿ ನಡೆದಿದೆ.

ಸಂಜಯ್‌ (19)ಮೃತ ಆಸ್ಪತ್ರೆ ಸಿಬ್ಬಂದಿ. ಮೂಲತಃ ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಾರ್ವತಿನಗರ ಮಂಜುನಾಥ್‌ ಎಂಬುವರ ಮಗನಾದ ಈತ ಕಳೆದ ಎರಡು ತಿಂಗಳಿನಿಂದ ಕುಣಿಗಲ್‌ ವೃತ್ತದ ಬಳಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಸ್ಟಾಫ್ ನರ್ಸ್‌ ಆಗಿ ಕೆಲಸಮಾಡುತ್ತಿದ್ದ.

ಎಂದಿನಂತೆ ಶನಿವಾರ ರಾತ್ರಿ ಕೆಲಸಕ್ಕೆ ಬಂದಿದ್ದ ಈತ ತಡರಾತ್ರಿ ವೇಳೆ ಆಸ್ಪತ್ರೆಯಲ್ಲಿ ಭಾನುವಾರ ಬೆಳ್ಳಗ್ಗೆ ರೋಗಿಯೊಬ್ಬರ ಶಸ್ತ್ರಚಿಕಿತ್ಸೆಯಿದ್ದ ಕಾರಣಕ್ಕೆ ಶನಿವಾರ ತಡರಾತ್ರಿವರೆಗೂ ಶಸ್ತ್ರಚಿಕಿತ್ಸಾ ಘಟಕವನ್ನು ಸಿದ್ಧಪಡಿಸಿದ ಬಳಿಕ ಸ್ವತಃ ಮಾರಣಾಂತಿಕವಾದ ರೀತಿಯಲ್ಲಿ ಇಂಜೆಕ್ಷನ್‌ ಮಾಡಿಕೊಂಡು ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಪ್ರಕರಣ ನೆಲಮಂಗಲ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

ಸಂಜಯ್‌ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇನ್ಸ್‌ಪೆಕ್ಟರ್‌ ಎ.ವಿ.ಕುಮಾರ್‌ ಮತ್ತು ಸಿಬ್ಬಂದಿ ತನಿಖೆಯನ್ನು ಕೈಗೊಂಡಿದ್ದು, ಪೊಲೀಸರ ತನಿಖೆಯಿಂದಷ್ಟೇ ಸಾವಿನ ಸತ್ಯಾಸತ್ಯತೆ ಹೊರಬರಬೇಕಿದೆ. ಆತ್ಮಹತ್ಯೆ ಪ್ರಕರಣ ತಾಲೂಕಿನ ವೈದ್ಯಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.ಸಂಜಯ್‌ ಸಾವು ಆಕಸ್ಮಿಕವಾಗಿಲ್ಲ. ಈತನ ಸಾವಿನ ವಿಚಾರದಲ್ಲಿ ಅನುಮಾನವಿದೆ ಎಂದು ಮೃತನ ಪೋಷಕರು ಪೊಲೀಸರ ಬಳಿಯಲ್ಲಿ ಶಂಕೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು, ಸೂಕ್ತ ತನಿಖೆಯಿಂದಷ್ಟೇ ಸತ್ಯ ಹೊರಬರಲಿದೆ.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ