Breaking News

ದ್ರಾವಣ ಸಿಂಪಡಣಾ ಸುರಂಗ ಮಾರ್ಗಕ್ಕೆ ಸಚಿವ ರಮೇಶ

Spread the love

ಗೋಕಾಕ್ : ನಗರದ ಸಾರ್ವಜನಿಕರ ಆಸ್ಪತ್ರೆಯಲ್ಲಿ ಕೊರೊನಾ ನಿಯಂತ್ರಣಗೊಳಿಸುವ ನಿಟ್ಟಿನಲ್ಲಿ ಸೋಂಕು ತೊಡೆದು ಹಾಕುವ ದ್ರಾವಣ ಸಿಂಪಡಣಾ ಸುರಂಗ ಮಾರ್ಗ ವನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಇಂದು ಉದ್ಘಾಟಿಸಿದರು.

ಕೊರೊನಾ ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕ್ಷೇತ್ರದ ಜನರ ಆರೋಗ್ಯ ದೃಷ್ಟಿಯಿಂದ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಈ ವಿನೂತನ ಪ್ರಯೋಗ ಮಾಡಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಿ. ಸಾರ್ವಜನಿಕರು ಸಹ ವೈದ್ಯರು, ಪೊಲೀಸರಿಗೆ ಸಹಕರಿಸಬೇಕು. ಲಾಕ್ ಡೌನ್ ನಿಯಮಗಳನ್ನು ಪಾಲಿಸಿ ಎಂದು ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು. ಆಸ್ಪತ್ರೆಯ ಸಿಬ್ಬಂದಿ ಸೇರಿದಂತೆ ಎಲ್ಲ ಅಧಿಕಾರಿಗಳು ಸಾಲಾಗಿ ನಿಂತು ದ್ರಾವಣ ಸಿಂಪಡಿಸಿಕೊಂಡರು.


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ