Breaking News

ಹಾರೂಗೇರಿ : ಕಬ್ಬು ತುಂಬಿದ ಟ್ರ್ಯಾಕ್ಟ‌ರ್ ಪಲ್ಟಿ ; ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

Spread the love

ರಾಯಬಾಗ : ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ ಗೂಡಂಗಡಿಗಳ ಮೇಲೆ ಪಲ್ಟಿ ಆಗಿರುವ ಘಟನೆ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.

 

ಸಕ್ಕರೆ ಕಾರ್ಖಾನೆಗೆ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟ‌ರ್ ಪಲ್ಟಿ ಆಗಿದೆ. ಹಾರೂಗೇರಿ – ರಾಯಬಾಗ ರಸ್ತೆಯ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಘಟನೆ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

 

ಘಟನೆಯಲ್ಲಿ ಟ್ರ್ಯಾಕ್ಟ‌ರ್ ಚಾಲಕನ ಅಜಾಗರೂಕತೆ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದ್ದು, ಹಾರೂಗೇರಿ ಪೊಲೀಸ್‌ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿನೀಡಿ ರಸ್ತೆ ಮೇಲೆ ಬಿದ್ದಿದ್ದ ಕಬ್ಬು ಸ್ಥಳಾಂತರ ಮಾಡಲಾಗುತ್ತಿದೆ.


Spread the love

About Laxminews 24x7

Check Also

ಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ಯಾಕೆ ಕೊಡಬಾರದು – ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

Spread the loveಬೆಂಗಳೂರು: ಶಾಶ್ವತ ನಿವಾಸ ಪ್ರಮಾಣ ಪತ್ರ ರಾಜ್ಯ ಸರ್ಕಾರ ಯಾಕೆ ಕೊಡಬಾರದು? ಆ ರೀತಿ ನಿಯಮ ಇದ್ಯಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ