Breaking News
Home / ಜಿಲ್ಲೆ / ಯಾವುದೋ ರಾಜ್ಯಕ್ಕೆ ಹೋಗಬೇಕಾದ 50ಕ್ಕೂ ಹೆಚ್ಚು ಕಾರ್ಮಿಕರು ಬೆಳಗಾವಿಗೆ,ಲಕ್ಷ್ಮಿ ಹೆಬ್ಬಾಳಕರ್ ಮಾನವೀಯತೆ

ಯಾವುದೋ ರಾಜ್ಯಕ್ಕೆ ಹೋಗಬೇಕಾದ 50ಕ್ಕೂ ಹೆಚ್ಚು ಕಾರ್ಮಿಕರು ಬೆಳಗಾವಿಗೆ,ಲಕ್ಷ್ಮಿ ಹೆಬ್ಬಾಳಕರ್ ಮಾನವೀಯತೆ

Spread the love

ಬೆಳಗಾವಿ – ವ್ಯವಸ್ಥೆ ಹಲವು ಬಾರಿ ಎಷ್ಟೊಂದು ಬೇಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತದೆ ಎನ್ನುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಸರಕಾರಿ ಕಾರ್ಮಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಿದ್ದೇ ತಪ್ಪಾಯಿತೇನೋ ಎನ್ನುವ ರೀತಿಯಲ್ಲಿದೆ ಈ ಘಟನೆ.
ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತಿತರ ರಾಜ್ಯಗಳಿಗೆ ತೆರಳಬೇಕಿದ್ದ ಕಾರ್ಮಿಕರು ಉಚಿತ ಬಸ್ ಹತ್ತಿ ಬೆಳಗಾವಿಗೆ ಬಂದಿದ್ದಾರೆ. ಟಿಕೆಟ್ ಪಡೆಯುವ ವ್ಯವಸ್ಥೆ ಇದ್ದಿದ್ದರೆ ಕಂಡಕ್ಟರ್ ಎಲ್ಲಿಗೆ ಎಂದು ಕೇಳುತ್ತಿದ್ದರು. ಆಗ ಅವರನ್ನು ಕೆಳಗಿಳಿಸಬಹುದಿತ್ತು. ಆದರೆ ಯಾರೂ ಕೇಳಲಿಲ್ಲ, ಅವರೆಲ್ಲ ರಾತ್ರಿ ಬೆಂಗಳೂರಲ್ಲಿ ಬಸ್ ಹತ್ತಿ ಬೆಳಗ್ಗೆ ಬೆಳಗಾವಿಗೆ ಬಂದಿಳಿದಿದ್ದಾರೆ.
ಬೇರೆ ಬೇರೆ ಬಸ್ ಗಳಲ್ಲಿ ಸುಮಾರು 50ಕ್ಕಿಂತ ಹೆಚ್ಚು ಕಾರ್ಮಿಕರು, ಗಂಟು ಮೂಟೆ, ಹೆಂಡತಿ, ಮಕ್ಕಳೊಂದಿಗೆ ಬೆಳಗಾವಿಗೆ ಬಂದಿದ್ದಾರೆ. ಇಲ್ಲಿ ಬಸ್ ಇಳಿಯುತ್ತಿದ್ದಂತೆ ಅವರನ್ನೆಲ್ಲ ಕ್ವಾರಂಟೈನ್ ಮಾಡಬೇಕಿದ್ದರಿಂದ ಅಧಿಕಾರಿಗಳು ವಿಚಾರಿಸಿದ್ದಾರೆ. ಆಗ ಶಾಕ್ ಆಗಿದೆ. ಅವರೆಲ್ಲ ಎಲ್ಲೆಲ್ಲೋ ಹೋಗಬೇಕಿತ್ತು. ಈಗ ಅನಿವಾರ್ಯವಾಗಿ ಅವರು ತಲುಪಬೇಕಾದ ಸ್ಥಳಕ್ಕೆ ಮತ್ತೆ ಬೇರೆ ವ್ಯವಸ್ಥೆ ಮಾಡಿ ಕಳಿಸಬೇಕಿದೆ. ಅಲ್ಲಿಯವರೆಗೆ ಹಾಲಭಾವಿ ಮೊರಾರ್ಜಿ ದೇಸಾಯಿ ಶಾಲಾ ತಂಗುದಾಣದಲ್ಲಿ ಅವರನ್ನೆಲ್ಲ ಕ್ವಾರಂಟೈನ್ ಮಾಡಲಾಗಿದೆ. ಇದಕ್ಕೆ ಯಾರ ಬೇಜವಾಬ್ದಾರಿ ಎನ್ನಬೇಕು?
ಬೆಂಗಳೂರಿಂದ ಬೆಳಗಾವಿಗೆ ದಾರಿ ತಪ್ಪಿ ಆಗಮಿಸಿದ ಪರರಾಜ್ಯಗಳ ಕಾರ್ಮಿಕರನ್ನು ಇಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭೇಟಿಯಾಗಿ ಧೈರ್ಯ ತುಂಬಿದರು.
 ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತಿತರ ರಾಜ್ಯಗಳ ಕಾರ್ಮಿಕರು ಮತ್ತು ಅಸಹಾಯಕ ಜನರು ರಾಜ್ಯ ಸರಕಾರಿ ಬಸ್ಸ್ ಗಳ ಮೂಲಕ ಬೆಳಗಾವಿಗೆ ತಲುಪಿರುವ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿದ ಹೆಬ್ಬಾಳಕರ್ ಅವರಿಗೆಲ್ಲ ಆಹಾರ ಮತ್ತಿತರ ಸಾಮಗ್ರಿಗಳನ್ನು ವಿತರಿಸಿದರು.
ಹಲವಾರು ಕಾರ್ಮಿಕರಿಗೆ ಹಸುಗೂಸುಗಳಿದ್ದು ಅವರ ಪಾಡು ಹೇಳತೀರದು. ಅವರಿಗೆಲ್ಲ ಹಾಲು, ಬಿಸ್ಕೀಟ್, ಬ್ರೇಡ್‌, ಸೋಪು ಮತ್ತಿತರ ವಸ್ತುಗಳನ್ನು ವೈಯಕ್ತಿಕ ಕಾಳಜಿಯಿಂದ ವಿತರಿಸಿದ ಲಕ್ಷ್ಮಿ ಹೆಬ್ಬಾಳಕರ್,  ಉತ್ತರ ಭಾರತೀಯರ ಆಹಾರ ಕ್ರಮದ ಅರಿವು ಇದ್ದು, ಅವರಿಗೆ ಬೇಕಾಗುವ ರೊಟ್ಟಿ- ಸಬ್ಜಿ ಮುಂತಾದ ಆಹಾರ ಪದಾರ್ಥಗಳನ್ನು ಒದಗಿಸುತ್ತೇನೆ. ಜೊತೆಗೆ, ಬೆಳಗಾವಿ ಜಿಲ್ಲಾಡಳಿತದ ಪಾಲನೆಯ ಸುಪರ್ಧಿಯಲ್ಲಿರುವ ಈ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸಲು ಮುಂದಿರುವ ಮಾರ್ಗಗಳ ಬಗ್ಗೆ ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಉಪ ಆಯುಕ್ತ ಎಸ್. ಬಿ. ದೊಡಗೌಡರ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

 


Spread the love

About Laxminews 24x7

Check Also

ಬತ್ತಿದ ಜೀವನದಿ; ಹೆಚ್ಚಿದ ದುಗುಡ

Spread the love ಚಿಕ್ಕೋಡಿ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯಲ್ಲಿ ನೀರಿನ ಪ್ರಮಾಣ ತೀವ್ರ ಕುಸಿತ ಕಂಡಿದೆ. ಇದರಿಂದ ಮನುಷ್ಯರು ಮಾತ್ರವಲ್ಲ; …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ