Breaking News

ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಜಾಗೃತಿ ಮೂಡಿಸಿ. ಆರ.ಎಸ್ ಎಸ್.

Spread the love

ನವದೆಹಲಿ: ಸರ್ಕಾರಗಳ ಟೆಂಡರ್ ಗಳಲ್ಲಿ ಭಾಗವಹಿಸಿರುವ ಚೀನಾದ ಎಲ್ಲ ಕಂಪನಿಗಳಿಗೆ ನಿಷೇಧ ಹೇರಬೇಕು. ಅಲ್ಲದೆ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಜನರಿಗೆ ಪ್ರೋತ್ಸಾಹ ನೀಡಬೇಕು ಎಂದು ಆರ್‍ಎಸ್‍ಎಸ್ ಸಂಯೋಜಿತ ಸ್ವದೇಶಿ ಜಾಗರಣ್ ಮಂಚ್(ಎಸ್‍ಜೆಎಂ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಚೀನಾ ಉಪಟಳ ಹೆಚ್ಚುತ್ತಿದ್ದು, ಜೂನ್ 15 ಹಾಗೂ 16ರಂದು ಪೂರ್ವ ಲಡಾಕ್‍ನ ಗಲ್ವಾನ್ ಕಣಿವೆಯಲ್ಲಿ ಭಾರತೀಯ ಸೇನೆ ಹಾಗೂ ಚೀನಾ ಮಧ್ಯೆ ನಡೆದ ದಾಳಿ, ಪ್ರತಿ ದಾಳಿಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಇವರಿಗೆ ಗೌರವ ಸಲ್ಲಿಸಬೇಕಾದರೆ ದೇಶದಲ್ಲಿ ಚೀನಾ ಕಂಪನಿ ಹಾಗೂ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಬೇಕು ಎಂದು ಸ್ವದೇಶಿ ಜಾಗರಣ್ ಮಂಚ್‍ನ ಅಶ್ವಿನಿ ಮಹಾಜನ್ ಆಗ್ರಹಿಸಿದ್ದಾರೆ. ಅಲ್ಲದೆ ನಟ, ನಟಿಯರು ಹಾಗೂ ಕ್ರಿಕೆಟ್ ಆಟಗಾರರು ಸಹ ಚೀನಾ ಉತ್ಪನ್ನಗಳನ್ನು ಪ್ರೋತ್ಸಾಹಿಸದಂತೆ ತಿಳಿಸಿದ್ದಾರೆ.

ಎಸ್‍ಜೆಎಂ ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ಚೀನಾ ವಸ್ತುಗಳಿಗೆ ಬಹಿಷ್ಕಾರ ಹಾಕುವುದರ ಜೊತೆಗೆ ಕೇಂದ್ರ ಸರ್ಕಾರದ ಎಲ್ಲ ಟೆಂಡರ್‍ಗಳಿಂದ ಚೀನಾ ಕಂಪನಿಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ CBI

Spread the loveತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂ ಲಡ್ಡು ತುಪ್ಪ ಕಲಬೆರಕೆ  ಪ್ರಕರಣದಲ್ಲಿ ಕೇಂದ್ರ ತನಿಖಾ ದಳ  ನೇತೃತ್ವದ ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ