Breaking News
Home / ಜಿಲ್ಲೆ / ಬೆಳಗಾವಿ / ಅಥಣಿ / ನಮ್ಮ ಕ್ಷೇತ್ರಕ್ಕೆ ಯಾವುದೇ ಅನ್ಯಾಯ ಆಗಿಲ್ಲ ನಂಬಿ ಬಿಜೆಪಿಗೆ ಬಂದಿದ್ದೇವೆ,  ಸಾಯುವವರೆಗೂ ಬಿಜೆಪಿ ಬಿಡಲ್ಲ

ನಮ್ಮ ಕ್ಷೇತ್ರಕ್ಕೆ ಯಾವುದೇ ಅನ್ಯಾಯ ಆಗಿಲ್ಲ ನಂಬಿ ಬಿಜೆಪಿಗೆ ಬಂದಿದ್ದೇವೆ,  ಸಾಯುವವರೆಗೂ ಬಿಜೆಪಿ ಬಿಡಲ್ಲ

Spread the love

ಬೆಂಗಳೂರು: ಪ್ರಧಾನಿ ಮೋದಿ, ಅಮಿತ್ ಶಾ, ಯಡಿಯೂರಪ್ಪ ಅವರನ್ನು ನಂಬಿ ಬಿಜೆಪಿಗೆ ಬಂದಿದ್ದೇವೆ,  ಸಾಯುವವರೆಗೂ ಬಿಜೆಪಿ ಬಿಡಲ್ಲ ಅಂತಾ ಅಥಣಿ ಶಾಸಕ ಮಹೇಶ ಕುಮಟಳ್ಳಿ ಹೇಳಿದ್ದಾರೆ.

ಉಮೇಶ ಕತ್ತಿ ನಿವಾಸದಲ್ಲಿ ಬಿಜೆಪಿ ಶಾಸಕರು ಸಭೆ ನಡೆಸಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು,
ಯಾರು ಸಭೆ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ, ನಾವಂತೂ ಸಭೆಗೆ ಹೋಗಿಲ್ಲ. ಯಾರು ಸಭೆಗೆ ಹೋಗಿದ್ದರು ಎಂಬುದು ಗೊತ್ತಿಲ್ಲ. ಈ ಬಗ್ಗೆ ನಾನು ಹೇಳಿಕೆ ಕೊಡೋದು ಸರಿಯಲ್ಲ. ನಾವು ಮುಖ್ಯಮಂತ್ರಿಗಳ  ಜತೆ ಇದ್ದೇವೆ. ಮುಂದೆ ಕೂಡ ಅವರ ಜೊತೆ ಇರುತ್ತೇವೆ.

ರಾಜಕೀಯ ವಿದ್ಯಮಾನದಲ್ಲಿ ನಾವು ರಾಜೀನಾಮೆ ಕೊಟ್ಟಿದ್ದೇವೆ. ಪದೇ ಪದೇ ರಾಜೀನಾಮೆ ಕೊಡುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡುವುದಿಲ್ಲ ಅಂತ ಸ್ಪಷ್ಟಪಡಿಸಿದ್ರು.

ನಮ್ಮ ಕ್ಷೇತ್ರಕ್ಕೆ ಯಾವುದೇ ಅನ್ಯಾಯ ಆಗಿಲ್ಲ. ಯತ್ನಾಳ್ ಅವ್ರ ಕ್ಷೇತ್ರಕ್ಕೆ ಅನ್ಯಾಯ ಆಗಿದ್ರೆ ಹೈಕಮಾಂಡ್ ಜೊತೆ ಮಾತನಾಡಲಿ ಎಂದರು.


Spread the love

About Laxminews 24x7

Check Also

ಸಂಚಾರ ದಟ್ಟಣೆಯಿಂದ ಹೈರಾಣದ ಜನ

Spread the love ಅಥಣಿ: ಪಟ್ಟಣದಲ್ಲಿ ದಿನೇದಿನೇ ಹೆಚ್ಚುತ್ತಿರುವ ಸಂಚಾರ ದಟ್ಟಣೆಯ ಕಾರಣ ಜನ ಬೇಸತ್ತು ಹೋಗಿದ್ದಾರೆ. ಕೆಲಸ ಕಾರ್ಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ