Breaking News
Home / ಜಿಲ್ಲೆ / ಬೆಂಗಳೂರು / ರಾಜ್ಯದ ಉಚಿತ ಬಸ್​ ವ್ಯವಸ್ಥೆ ಅವಧೀ ಮುಗಿದಿದೆ.ಒಂದು ವಾರದಲ್ಲಿ ಬೆಂಗಳೂರಿನಿಂದ ಊರುಗಳತ್ತ ತೆರಳಿದ 1,‌08,300 ಕಾರ್ಮಿಕರು

ರಾಜ್ಯದ ಉಚಿತ ಬಸ್​ ವ್ಯವಸ್ಥೆ ಅವಧೀ ಮುಗಿದಿದೆ.ಒಂದು ವಾರದಲ್ಲಿ ಬೆಂಗಳೂರಿನಿಂದ ಊರುಗಳತ್ತ ತೆರಳಿದ 1,‌08,300 ಕಾರ್ಮಿಕರು

Spread the love

ದೇಶಾದ್ಯಂತ ಮೇ 17ರವರೆಗೆ ಲಾಕ್ ಡೌನ್ ಮುಂದುವರಿಸಲಾಗಿದೆ. ಕೆಲ ರಿಯಾಯಿತಿಗಳನ್ನು ನೀಡಲಾಗಿದ್ದು, ರಾಜ್ಯದೊಳಗಿನ ಕಾರ್ಮಿಕರು ತಮ್ಮ ತಮ್ಮ ಮನೆಗಳಿಗೆ ಸೇರಲಾರಂಭಿಸಿದ್ದಾರೆ. ಆದರೆ, ರಾಜ್ಯದಲ್ಲಿ ಸಿಲುಕಿಕೊಂಡಿರುವ ಹೊರ ರಾಜ್ಯದ ಕಾರ್ಮಿಕರು ಗೋಳು ಕೇಳುವವರೇ ಇಲ್ಲದಂತಾಗಿದೆ.

ಬೆಂಗಳೂರು(ಮೇ.08): ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಆದೇಶ ಮೇರೆಗೆ ಒಂದು ವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 1,‌08,300 ಕಾರ್ಮಿಕರನ್ನು ಕೆಎಸ್​ಆರ್​​ಟಿ ಬಸ್​ಗಳಲ್ಲಿ ಸ್ಥಳಾಂತರ ಮಾಡಲಾಗಿದೆ. ಸುಮಾರು 3610 ಬಸ್​ಗಳಲ್ಲಿ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಕಳಿಸಿಕೊಡಲಾಗಿದೆ ಎಂದು ಕೆಎಸ್​ಆರ್​​ಟಿಸಿ ಪ್ರಕಟಣೆ ಹೊರಡಿಸಿದೆ. ವಲಸೆ ಕಾರ್ಮಿಕರಿಗೆ ಮಾಡಲಾಗಿದ್ದ ಉಚಿತ ಬಸ್​ ವ್ಯವಸ್ಥೆ ನಿನ್ನೆಗೆ ಕೊನೆಗೊಂಡಿದೆ. ಹಾಗಾಗಿ ಇಂದಿನಿಂದ ಯಾವುದೇ ಉಚಿತ ಬಸ್ಸುಗಳು ಇರುವುದಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಯಾವುದೇ ಸ್ಥಳಗಳಿಂದ ಮತ್ಯಾವ ಪ್ರದೇಶಗಳಿಗೂ ಜನರನ್ನು ಕಳಿಸಲಾಗುವುದಿಲ್ಲ ಎನ್ನಲಾಗಿದೆ.

ದೇಶಾದ್ಯಂತ ಮೇ 17ರವರೆಗೆ ಲಾಕ್ ಡೌನ್ ಮುಂದುವರಿಸಲಾಗಿದೆ. ಕೆಲ ರಿಯಾಯಿತಿಗಳನ್ನು ನೀಡಲಾಗಿದ್ದು, ರಾಜ್ಯದೊಳಗಿನ ಕಾರ್ಮಿಕರು ತಮ್ಮ ತಮ್ಮ ಮನೆಗಳಿಗೆ ಸೇರಲಾರಂಭಿಸಿದ್ದಾರೆ. ಆದರೆ, ರಾಜ್ಯದಲ್ಲಿ ಸಿಲುಕಿಕೊಂಡಿರುವ ಹೊರ ರಾಜ್ಯದ ಕಾರ್ಮಿಕರು ಗೋಳು ಕೇಳುವವರೇ ಇಲ್ಲದಂತಾಗಿದೆ.

ರಾಜ್ಯದ ಮೂಲೆ ಮೂಲೆಗಳಲ್ಲಿ ಸಿಲುಕಿಕೊಂಡು ಕಾರ್ಮಿಕರು ತಮ್ಮ ಊರುಗಳಿಗೆ ವಾಪಸ್ಸಾಗುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಸಿಲುಕಿಕೊಂಡ ಹೊರ ರಾಜ್ಯದ ಕಾರ್ಮಿಕರ ಗೋಳು ಕೇಳುವವರೇ ಇಲ್ಲದಂತಾಗಿದೆ. ಹೊರ ರಾಜ್ಯದ ಕಾರ್ಮಿಕರಿಗೆ ಇನ್ನೂ ಸಿಕ್ಕಿಲ್ಲ ಮುಕ್ತಿ. ಒಂದೊಂದು ಜಿಲ್ಲೆಯಿಂದ ನೂರಾರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ತಮ್ಮ ತಮ್ಮ ರಾಜ್ಯಗಳಿಗೆ ಹೋಗಲು ಕಾರ್ಮಿಕರು ಕಾದು ಕುಳಿತಿದ್ದಾರೆ. ಈ ಹೊತ್ತಿಗಾಗಲೇ ರಾಜ್ಯದ ಉಚಿತ ಬಸ್​ ವ್ಯವಸ್ಥೆ ಅವಧೀ ಮುಗಿದಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ