Breaking News

ಯುಟ್ಯೂಬ್‍ನಿಂದ ದಿಢೀರ್ ಡಿಲೀಟ್ ಆಯ್ತು ಚಂದನವನ ತಾರೆಯರೆಲ್ಲ ಅಭಿನಯಿಸಿದ್ದ ಹಾಡು

Spread the love

ಬೆಂಗಳೂರು: ಇತ್ತೀಚೆಗೆ ಬದಲಾಗು ನೀನು ಬದಲಾಯಿಸು ನೀನು ಹಾಡಿನ ಮೂಲಕ ಸ್ಯಾಂಡಲ್‍ವುಡ್ ಎಲ್ಲ ತಾರೆಯರು ಸೇರಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಿದ್ದರು.

ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಸ್ತುತ ಪಡಿಸಿದ್ದ ಹಾಡನ್ನು ಪವರ್ ಓಡೆಯರ್ ನಿರ್ದೇಶನ ಮಾಡಿದ್ದರು. ಎಲ್ಲ ಕಲಾವಿದರ ಮನೆಗೆ ಹೋಗಿ ಹಾಡನ್ನು ಚಿತ್ರೀಕರಣ ಮಾಡಿದ್ದರು. ಅಂತಯೇ ಜೂನ್ 5ರಂದು ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ದಿ ಬೀಟ್ ಆಡಿಯೋದಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಿತ್ತು.

ಆದರೆ ಈಗ ಏಕಾಏಕಿ ಬದಲಾಗು ನೀನು ಬದಲಾಯಿಸು ನೀನು ಹಾಡು ಡಿಲೀಟ್ ಆಗಿದೆ. ಈ ಒಂದು ಹಾಡಿನಲ್ಲಿ ಸುದೀಪ್ ಅವರನ್ನು ಹೊರತು ಪಡಿಸಿ ದರ್ಶನ್, ಯಶ್, ಅಪ್ಪು, ಶಿವಣ್ಣ, ಗಣೇಶ್, ಸುಮಲತಾ, ಅಬಿಷೇಕ್, ಉಪೇಂದ್ರ ಸೇರಿದಂತೆ ಬಹುತೇಕ ಕನ್ನಡದ ಕಾಲವಿದರು ಹಾಡಿನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಈ ಹಾಡಿ ದಿಢೀರ್ ಡಿಲೀಟ್ ಆಗಿರೋದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಸಾರ್ವಜನಿಕರಲ್ಲಿ ಕೊರೊನಾ ನಂತರದ ದಿನಗಳ ಬಗ್ಗೆ ಅರಿವು ಮೂಡಿಸಲು ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಈ ಹಾಡನ್ನು ಮಾಡಿಸಲಾಗಿತ್ತು. ಸ್ಯಾಂಡಲ್‍ವುಡ್‍ನ ಎಲ್ಲಾ ಗಾಯಕರು ಇದರಲ್ಲಿ ಧನಿಯಾಗಿದ್ದರು. ಈ ಹಾಡು ಪವನ್ ಒಡೆಯರ್ ಮತ್ತು ಇಮ್ರಾನ್ ಸರ್ಧರಿಯಾ ಅವರ ನೇತೃತ್ವದಲ್ಲಿ ಮೂಡಿ ಬಂದಿತ್ತು. ಇದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ಸಾಥ್ ನೀಡಿದ್ದರು. ಜೊತೆಗೆ ರಾಜಕಾರಣಿಗಳು ಕೂಡ ಸಾಂಗಿನಲ್ಲಿ ಕಾಣಿಸಿಕೊಂಡಿದ್ದರು.


Spread the love

About Laxminews 24x7

Check Also

ಬೆಂಗಳೂರು ಕಾಲ್ತುಳಿತ ಖಂಡಿಸಿ ಬನಹಟ್ಟಿಯಲ್ಲಿ ಬಿಜೆಪಿ ಪ್ರತಿಭಟನೆ

Spread the love ಬೆಂಗಳೂರು ಕಾಲ್ತುಳಿತ ಖಂಡಿಸಿ ಬನಹಟ್ಟಿಯಲ್ಲಿ ಬಿಜೆಪಿ ಪ್ರತಿಭಟನೆ ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ