Breaking News
Home / new delhi / ದೇಶದ ಜನತೆಯ ಚಿತ್ತ ಪ್ರಧಾನಿ ಭಾಷಣದತ್ತ ನೆಟ್ಟಿದೆ.

ದೇಶದ ಜನತೆಯ ಚಿತ್ತ ಪ್ರಧಾನಿ ಭಾಷಣದತ್ತ ನೆಟ್ಟಿದೆ.

Spread the love

HomeNational News
ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿ ಪ್ರಧಾನಿ ಮೋದಿ ಮಾತು
ಲಾಕ್ ಡೌನ್ ಮುಗಿಯುತ್ತಾ? ಮುಂದುವರೆಯುತ್ತಾ?
By Pragativahini On May 12, 2020

Share
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದು, ಇಡೀ ದೇಶದ ಜನತೆಯ ಚಿತ್ತ ಪ್ರಧಾನಿ ಭಾಷಣದತ್ತ ನೆಟ್ಟಿದೆ.

ಈ ಬಗ್ಗೆ ಪ್ರಧಾನಿಗಳ ಕಾರ್ಯಾಲಯ ಟ್ವೀಟ್ ಮಾಡಿದ್ದು, ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ಹೇಳಿದೆ.

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಹೇರಲಾಗಿದ್ದ ಲಾಕ್ ಡೌನ್ ಬಗ್ಗೆ ಹಾಗೂ ಕೊರೊನಾ ಜತೆಗೆ ಜೀವನ ಶೈಲಿ ಕುರಿತಾಗಿ ಮಾತನಾಡಲಿದ್ದಾರೆ. ಇದರ ಜತೆಗೆ ಆರ್ಥಿಕ ಪ್ಯಾಕೆಜ್ ಬಗ್ಗೆ ಪ್ರಧಾನಿ ಮಾತನಾಡಲಿದ್ದಾರಾ ಎಂಬ ಕುತೂಹಲ ಕೂಡ ಇದೆ.

ನಿನ್ನೆಯಷ್ಟೇ ಪ್ರಧಾನಿ ಮೋದಿಯವರು ಹಲವು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದರು. ಈ ವೇಳೆ ಲಾಕ್ ಡೌನ್ ವಿಸ್ತರಣೆ ಬಗ್ಗೆ ಆಯಾ ರಾಜ್ಯಗಳೇ ನಿರ್ಧಾರ ಕೈಗೊಳ್ಳಬೇಕು ಎಂದು ತಿಳಿಸಿದ್ದರು


Spread the love

About Laxminews 24x7

Check Also

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ