ಇಂದೋರ್: ಗ್ರಾಮಸ್ಥರ ಆರೋಗ್ಯ ಪರೀಕ್ಷೆಗಾಗಿ ಬಂದಿದ್ದ ಸಿಬ್ಬಂದಿ ಮೇಲೆ ಕೆಲವರು ಹಲ್ಲೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಟಾಟಪಟ್ಟಿಯಲ್ಲಿ ನಡೆದಿದೆ. ಗ್ರಾಮಸ್ಥರಿಂದ ತಪ್ಪಿಸಿಕೊಂಡು ಓಡಿ ಹೋಗ್ತಿರುವ ದೃಶ್ಯಗಳ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಬುಧವಾರ ಒಂದೇ ದಿನ ಮಧ್ಯಪ್ರದೇಶದಲ್ಲಿ 12 ಕೊರೊನ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರ ಟಾವೆಲ್ ಹಿಸ್ಟರಿ ಹಿಡಿದು ವೈದ್ಯಕೀಯ ಸಿಬ್ಬಂದಿ ಗ್ರಾಮಗಳಿಗೆ ತೆರಳಿ ಗ್ರಾಮಸ್ಥರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸುವ ಮೂಲಕ ಎಲ್ಲರ ಆರೋಗ್ಯದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಡಾಕ್ಟರ್, ನರ್ಸ್ ಗಳನ್ನು ಒಳಗೊಂಡ ತಂಡ ಟಾಟಪಟ್ಟಿ ಇಲಾಖೆಯ ಗ್ರಾಮಕ್ಕೆ ಭೇಟಿ ನೀಡಿತ್ತು. ಆದ್ರೆ ಗ್ರಾಮಸ್ಥರು ಸಿಬ್ಬಂದಿಯ ಮೇಲೆ ಕಲ್ಲು ಎಸೆದಿದ್ದಾರೆ. ಇದರಿಂದ ಭಯಗೊಂಡು ಸಿಬ್ಬಂದಿ ಜೀವ ಉಳಿಸಿಕೊಂಡು ಓಡಿ ಬರುತ್ತಿರುವ ದೃಶ್ಯಗಳು ಮೊಬೈಲಿನಲ್ಲಿ ಸೆರೆಯಾಗಿವೆ.
Laxmi News 24×7