Breaking News

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಒಂದೇ ದಿನದಲ್ಲಿ 42 ಜನರಲ್ಲಿ ಸೋಂಕು.

Spread the love

ಬೆಂಗಳೂರು: ಮೂರನೇ ಹಂತದ ಲಾಕ್ ಡೌನ್ ಅವಧಿ ಮುಗಿಯುತ್ತಾ ಬಂದರೂ ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಒಂದೇ ದಿನದಲ್ಲಿ 42 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಬಾಗಲಕೋಟೆ ಜಿಲ್ಲೆಯೊಂದರಲ್ಲೇ ಇಂದು ಬರೋಬ್ಬರಿ 15 ಜನರಲ್ಲಿ ಸೋಂಕು ದೃಢವಾಗಿದೆ. ಧಾರವಾಡದಲ್ಲಿ 9, ಹಾಸನ 5, ಬೆಂಗಳೂರು 3,ಯಾದಗಿರಿ 2, ದಕ್ಷಿಣ ಕನ್ನಡದಲ್ಲಿ 2, ಚಿಕ್ಕಬಳ್ಳಾಪುರ 1, ಕಲಬುರಗಿ 1 ಪ್ರಕರಣ ಪತ್ತೆಯಾಗಿದೆ.

ಇಂದು ಸೋಂಕು ಪತ್ತೆಯಾದ 42 ಜನರ ಪೈಕಿ 25 ಜನರಿಗೆ ಅಹಮದಾಬಾದ್ ನಂಟು ಇದ್ದು, ಇವರೆಲ್ಲ ಅಹಮದಾಬಾದ್ ತಬ್ಲಿಗ್ ಜಮಾತ್ ಗೆ ಹೋಗಿ ಬಂದವರಾಗಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ