Breaking News

ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವು

Spread the love

ಕಾಸರಗೋಡು: ದುರಂತವೊಂದರಲ್ಲಿದರಲ್ಲಿ , ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಾಸರಗೋಡು ಜಿಲ್ಲೆ ಕನ್ನಂಗಾಡಿನ ಕಲ್ಲುರಾವಿಯಲ್ಲಿ ನಡೆದಿದೆ.

ಮೃತರನ್ನು ನೂರುದ್ದೀನ್ ಅವರ ಮಗ ಬಶೀರ್ (4), ನಾಸಿರ್ ಅವರ ಪುತ್ರ ಅಜ್ನಾಸ್ (5) ಮತ್ತು ಸಮೀರ್ ಅವರ ಪುತ್ರ ನಿಷಾದ್ (6) ಎಂದು ಗುರುತಿಸಲಾಗಿದೆ.

ವರದಿಗಳ ಪ್ರಕಾರ, ಮಕ್ಕಳು ಆಟವಾಡಲು ಕೆರೆಗೆ ಇಳಿದಿದ್ದಾರೆ. ಮನೆ ಸಮೀಪ ಆಟವಾಡುತ್ತಿದ್ದ ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ ಎಂದು ಪೋಷಕರು ತಿಳಿಸಿದ್ದಾರೆ. ಪೋಷಕರು ಮಕ್ಕಳ ಹುಡುಕಾಟ ನಡೆಸಿದ್ದಾರೆ.ಈ ವೇಳೆ ಮನೆಯಿಂದ 200 ಮೀಟರ್ ದೂರದಲ್ಲಿರುವ ಕೆರೆಯಲ್ಲಿ ಮಕ್ಕಳ ಶವ ಪತ್ತೆಯಾಗಿದೆ.

ಸ್ಥಳೀಯರು ತಕ್ಷಣ ಮಕ್ಕಳನ್ನು ಕನ್ನಂಗಾಡಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಕ್ಕಳು ಅದಾಗಲೇ ಮೃತಪಟ್ಟರೆಂದು ವೈದ್ಯರು ದೃಢಪಡಿಸಿದರು


Spread the love

About Laxminews 24x7

Check Also

ಅಧಿಕಾರ ಹಂಚಿಕೆ ಗೊಂದಲದ ಮಧ್ಯೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಕ್ಸ್​ನಲ್ಲಿ ಮಾಡಿದ ‘ಕೊಟ್ಟ ಮಾತು’ ಪೋಸ್ಟ್ ಕುತೂಹಲ ಹೆಚ್ಚಿಸಿದೆ.

Spread the loveಬೆಂಗಳೂರು: ‘ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಿಂಗಲ್ ಲೈನ್ ಎಕ್ಸ್​ ಪೋಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ