Breaking News
Home / ಜಿಲ್ಲೆ / ಮೈಸೂರಿನಲ್ಲಿ ಮತ್ತೆ 7 ಮಂದಿಗೆ ಕೊರೊನಾ

ಮೈಸೂರಿನಲ್ಲಿ ಮತ್ತೆ 7 ಮಂದಿಗೆ ಕೊರೊನಾ

Spread the love

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 163ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 163ಕ್ಕೆ ಏರಿದ್ದು, ಕಳೆದ 24 ಗಂಟೆಯಲ್ಲಿ 12 ಹೊಸ ಕೊರೊನಾ ಸೊಂಕಿತ ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

12 ಕೊರೊನಾ ಸೋಂಕಿತ ಪ್ರಕರಣದಲ್ಲಿ 7 ಮಂದಿ ಮೈಸೂರು, ಇಬ್ಬರು ಬಾಗಲಕೋಟೆ, ಒಬ್ಬರು ಕೇರಳ, ಒಬ್ಬರು ಬೆಂಗಳೂರು, ಒಬ್ಬರು ಬೆಂಗಳೂರು ಗ್ರಾಮಂತರಕ್ಕೆ ಸೇರಿದವರಾಗಿದ್ದಾರೆ. ಈವರೆಗೆ ದಾಖಲಾದ 163 ಸೊಂಕಿತರಲ್ಲಿ 9 ಮಂದಿ ಕೇರಳ ಮೂಲದವರಾಗಿದ್ದು, ಸದ್ಯ ಕರ್ನಾಟಕದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದಿನ ಹೊಸ ಪ್ರಕರಣದಿಂದಾಗಿ ಮೈಸೂರು ಜಿಲ್ಲೆಯಲ್ಲಿ 35 ಮಂದಿಗೆ ಕೊರೊನಾ ಬಂದಿದ್ದರೆ ಬೆಂಗಳೂರು ನಗರದಲ್ಲಿ 59 ಮಂದಿಗೆ ಕೊರೊನಾ ಬಂದಿದೆ

.

ರೋಗಿ 152 – ಬೆಂಗಳೂರಿನ 32 ವರ್ಷದ ಪುರುಷ. ರೋಗಿ 43 ಹಾಗೂ ರೋಗಿ 44 ಅವರ ಮಗ. ಈ ಇಬ್ಬರು ರೋಗಿಗಳ ಜೊತೆ ಇವರು ಪ್ರಾಥಮಿಕ ಸಂಪರ್ಕ ಹೊಂದಿದ್ದರು. ಇವರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 153 – ಕೇರಳ ಮೂಲದ 62 ವರ್ಷದ ವೃದ್ಧೆ. ಜರ್ಮನಿಗೆ ಪ್ರಯಾಣ ಮಾಡಿರುವ ಹಿನ್ನೆಲೆ ಇದ್ದು, ಕೇರಳ ಮೂಲದ ರೋಗಿ 106 ಹಾಗೂ ಕ್ವಾರಂಟೈನ್ ಅಲ್ಲಿರುವ ರೋಗಿ 133 ಜೊತೆ ಸಂಪರ್ಕ ಹೊಂದಿದ್ದರು. ಈವರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 157 – ಮೈಸೂರಿನ 22 ವರ್ಷದ ಯುವಕ. ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರಯಾಣ ಮಾಡಿರುವ ಹಿನ್ನೆಲೆ ಇದ್ದು, ಈತನನ್ನೂ ಕೂಡ ಮೈಸೂರಿನ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

ರೋಗಿ 158 – ಮೈಸೂರಿನ 26 ವರ್ಷದ ಯುವಕ. ಈತನ ವಿವರವನ್ನು ಕಲೆಹಾಕಲಾಗುತ್ತಿದ್ದು, ಮೈಸೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.

ರೋಗಿ 159 – ಮೈಸೂರಿನ 32 ವರ್ಷದ ಮಹಿಳೆ. ರೋಗಿ 52 ಅವರ ರೀತಿಯೇ ಇವರು ಕೂಡ ಫಾರ್ಮಸಿಟಿಕಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರನ್ನು ಮೈಸೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಿ ನಿಗಾ ವಹಿಸಲಾಗಿದೆ.

ರೋಗಿ 160 – ಮೈಸೂರಿನ 35 ವರ್ಷದ ಪುರುಷ. ಇವರು ದುಬೈಗೆ ಪ್ರಯಾಣ ಮಾಡಿರುವ ಹಿನ್ನೆಲೆ ಹೊಂದಿದ್ದು, ಇವರಿಗೂ ಕೂಡ ಮೈಸೂರಿನ ಜಿಲ್ಲಾಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 161 – ಬಾಗಲಕೋಟೆಯ 56 ವರ್ಷದ ಮಹಿಳೆ. ಇವರು ರೋಗಿ 125 ಅವರ ಪತ್ನಿ. ರೋಗಿ 125 ಅವರ ಜೊತೆ ಸಂಪರ್ಕದಲ್ಲಿದ್ದ ಕಾರಣ ಇವರಿಗೂ ಸೋಂಕು ತಗುಲಿದೆ. ಇವರಿಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.

ರೋಗಿ 162 – ಬಾಗಲಕೋಟೆಯ 58 ವರ್ಷದ ಪುರುಷ. ಇವರು ರೋಗಿ 125 ಅವರ ಸಹೋದರ. ರೋಗಿ 125 ಅವರ ಜೊತೆ ಸಂಪರ್ಕದಲ್ಲಿದ್ದ ಕಾರಣ ಇವರಿಗೂ ಸೋಂಕು ತಗುಲಿದ್ದು, ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಒಳಪಡಿಸಲಾಗಿದೆ.

ರೋಗಿ 163 – ಬೆಂಗಳೂರು ಗ್ರಾಮಾಂತರದ 43 ವರ್ಷದ ಪುರುಷ. ಇವರು ದೆಹಲಿಯಲ್ಲಿ ಮಾರ್ಚ್ 13ರಿಂದ 18ರವರೆಗೆ ನಡೆದಿದ್ದ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗಿಯಾಗಿದ್ದರು. ಇವರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈವರೆಗೆ ವರದಿಯಾದ 163 ಸೋಂಕಿತರಲ್ಲಿ 20 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 139 ಮಂದಿ ಇನ್ನೂ ಸೊಂಕಿನಿಂದ ಬಳಲುತ್ತಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದ 25 ಜಿಲ್ಲೆಗಳಿಂದ ಇಂದು 47 ಮಂದಿ ಹೊಸ ಕೊರೊನಾ ಶಂಕಿತರನ್ನು ಪತ್ತೆಹಚ್ಚಲಾಗಿದ್ದು, ಶಂಕಿತರು ಯಾವ ಜಿಲ್ಲೆಯವರೋ ಆ ಜಿಲ್ಲಾಸ್ಪತ್ರೆಗಳಲ್ಲಿಯೇ ಅವರನ್ನು ಪ್ರತ್ಯೇಕವಾಗಿರಿಸಿ ನಿಗಾ ವಹಿಸಲಾಗಿದೆ. ಈವರೆಗೆ 333 ಮಂದಿ ಶಂಕಿತರನ್ನು ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರಿಸಲಾಗಿತ್ತು, ಅವರಲ್ಲಿ ಇಂದು 120 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ.


Spread the love

About Laxminews 24x7

Check Also

ಅರ್ಥಿಂಗ್ ಸಮಸ್ಯೆ – ಶೌಚಾಲಯಕ್ಕೆ ಬೀಗ, ಬಹಿರ್ದೆಸೆಗೆ ಮಹಿಳೆಯರ ಅಲೆದಾಟ

Spread the loveಸಿಂಧನೂರು: ನಗರದ ವಾರ್ಡ್ ನಂ.19ರ ವ್ಯಾಪ್ತಿಗೊಳಪಡುವ ಶರಣಬಸವೇಶ್ವರ ಕಾಲೊನಿಯಲ್ಲಿ ಸಾರ್ವಜನಿಕ ಮಹಿಳಾ ಶೌಚಾಲಯಕ್ಕೆ ಬೀಗ ಹಾಕಿರುವ ಘಟನೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ