Breaking News

ಸೋಂಕು ನಿವಾರಣಾ ಸುರಂಗ ಮಾರ್ಗ ಉದ್ಘಾಟಿಸಿದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ

Spread the love

ಇಲ್ಲಿನ ರೋಟರಿ ಸಂಸ್ಥೆ, ರೋಟರಿ ಸೇವಾ ಸಂಘ , ಇನ್ನರವ್ಹೀಲ ಸಂಸ್ಥೆ ಹಾಗೂ ನಗರಸಭೆ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಬಸವೇಶ್ವರ ವೃತ್ತದಲ್ಲಿ ಮಹಾಮಾರಿ ಕೊರೋನಾ ಸೋಂಕು ನಿಯಂತ್ರಣಗೋಳಿಸುವ ನಿಟ್ಟಿನಲ್ಲಿ ಸೋಂಕು ತೊಡೆದು ಹಾಕುವ ದ್ರಾವಣ ಸಿಂಪಡಣಾ ಸುರಂಗ ಮಾರ್ಗವನ್ನು ಶುಕಾರವಾರದಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಉದ್ಘಾಟಿಸಿದರು

ನಂತರ ಮಾತನಾಡಿದ ಸಚಿವರು ಅಗತ್ಯ ವಸ್ತುಗಳಿಗೆ ಹೊರ ಬರುವವರು ಈ ಸುರಂಗ ಮಾರ್ಗದ ಮೂಲಕ ತೆರಳುವಂತೆ ಜಾಗೃತಿ ಮೂಡಿಸಬೇಕು . ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜನರು ಈ ಸುರಂಗ ಮಾರ್ಗದಲ್ಲಿ ಪ್ರವೇಶಿಸಬೇಕು. ನಗರದ ಇನ್ನುಳಿದ ಜನನಿಬಿಡ ಪ್ರಮುಖ ಸ್ಥಳಗಳಲ್ಲಿ ದ್ರಾವಣ ಸಿಂಪಡಣಾ ಕೇಂದ್ರಗಳನ್ನು ತೆರೆಯಲು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಡಿ.ಎಸ್.ಪಿ ಡಿ.ಟಿ.ಪ್ರಭು , ಪೌರಾಯುಕ್ತ ಶಿವಾನಂದ ಹಿರೇಮಠ, ಎಂ.ಎಚ್.ಗಜಾಕೋಶ , ಮುಖಂಡರುಗಳಾದ ಸೋಮಶೇಖರ್ ಮಗದುಮ್ಮ , ಮಹಾಂತೇಶ ತಾಂವಶಿ ಸೇರಿದಂತೆ ಇತರರು ಇದ್ದರು .

 


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ