Breaking News
Home / ಜಿಲ್ಲೆ / ಶಾಶ್ವತವಾಗಿ ಮದ್ಯಪಾನ ನಿಷೇಧಿಸಿ – ಸರ್ಕಾರಕ್ಕೆ ರೈತ ಮುಖಂಡರ ಮನವಿ

ಶಾಶ್ವತವಾಗಿ ಮದ್ಯಪಾನ ನಿಷೇಧಿಸಿ – ಸರ್ಕಾರಕ್ಕೆ ರೈತ ಮುಖಂಡರ ಮನವಿ

Spread the love

ಶಿವಮೊಗ್ಗ: ಕೊರೊನಾ ವೈರಸ್ ಭೀತಿಯಿಂದಾಗಿ ಇಡೀ ದೇಶವನ್ನೇ ಲಾಕ್‍ಡೌನ್ ಮಾಡಲಾಗಿದೆ. ಲಾಕ್‍ಡೌನ್‍ನಿಂದಾಗಿ ಮದ್ಯದ ಅಂಗಡಿಗಳನ್ನು ಮುಚ್ಚಲಾಗಿದೆ. ಆದರೆ ಈಗ ಮುಚ್ಚಿರುವ ಮದ್ಯದ ಅಂಗಡಿಗಳನ್ನು ಮತ್ತೆ ತೆರೆಯಲು ಅವಕಾಶ ಕೊಡದೆ, ಶಾಶ್ವತವಾಗಿ ಮುಚ್ಚುವಂತೆ ಶಿವಮೊಗ್ಗದಲ್ಲಿ ರೈತ ಸಂಘದ ಮುಖಂಡರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ರೈತ ಸಂಘದ ಮುಖಂಡರು ಕೊರೊನಾ ವೇಳೆ ಮದ್ಯಪಾನ ನಿಷೇಧದಿಂದಾಗಿ ಕುಡಿತಕ್ಕೆ ಒಳಗಾದವರ ಕುಟುಂಬಗಳು ನೆಮ್ಮದಿಯಿಂದ ಇವೆ. ಹೀಗಾಗಿ ಇದೇ ರೀತಿ ಮದ್ಯದ ಅಂಗಡಿಗಳನ್ನು ಶಾಶ್ವತವಾಗಿ ಬಂದ್ ಮಾಡಿದರೇ ಮದ್ಯ ವ್ಯಸನಿಗಳ ಕುಟುಂಬಸ್ಥರು ನೆಮ್ಮದಿಯಿಂದ ಇರುತ್ತಾರೆ. ಆದ್ದರಿಂದ ಸರ್ಕಾರ ಹೇಗೋ ಕಳೆದ ಒಂದು ತಿಂಗಳಿನಿಂದ ಮದ್ಯದ ಮೇಲೆ ನಿರ್ಬಂಧ ವಿಧಿಸಿದೆ. ಇದನ್ನು ಹೀಗೆ ಮುಂದುವರಿಸುವಂತೆ ರೈತ ಮುಖಂಡರು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಈಗಾಗಲೇ ಮದ್ಯ ಸಿಗದೆ ಮದ್ಯ ಪ್ರಿಯರು ಕಂಗಾಲಾಗಿದ್ದಾರೆ. ಈ ಮದ್ಯೆ ರೈತ ಮುಖಂಡರು ಶಾಶ್ವತವಾಗಿ ಮದ್ಯ ನಿಷೇಧಿಸಿ ಎಂದು ಮನವಿ ಸಲ್ಲಿಸಿರುವುದು ಎಣ್ಣೆ ಪ್ರಿಯರ ಕೆಂಗಣ್ಣಿಗೆ ಕಾರಣವಾಗಿದೆ.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ