Breaking News

ಚಿನ್ನ ತೊಳೆದು ಕೊಡುವ ನೆಪದಲ್ಲಿ ಮಹಿಳೆಯೋರ್ವಳನ್ನ ವಂಚನೆ

Spread the love

ಹುಬ್ಬಳ್ಳಿ: ಚಿನ್ನ ತೊಳೆದು ಕೊಡುವ ನೆಪದಲ್ಲಿ ಮಹಿಳೆಯೋರ್ವಳನ್ನ ವಂಚನೆ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ-ಬಂಗಾರ ಲೂಟಿ ಮಾಡಿದ ಘಟನೆ ಹುಬ್ಬಳ್ಳಿಯ ಚೆನ್ನಪೇಟೆಯ ಸರಕಾರಿ ಶಾಲೆಯ ಹಿಂಭಾಗ ನಡೆದಿದೆ.

ವಿಷ್ಣುಸಾ ಪವಾರ ಎಂಬುವವರ ಮನೆಯಲ್ಲಿ ಸರೋಜಾ ಹಾಗೂ ಸೊಸೆ ಅನಿತಾ ಎಂಬುವವರೇ ಮೋಸಕ್ಕೆ ಒಳಗಾಗಿದ್ದು, ಆರು ಬಳೆ ಮತ್ತು ಮಂಗಳಸೂತ್ರ ತೊಳೆಯುವುದಾಗಿ ಹೇಳಿದ್ದಾರೆ.

ಕುಕ್ಕರಿನಲ್ಲಿ ಬಂಗಾರ ತೊಳೆಯುವ ನೆಪ ಮಾಡಿ, ಸೊಸೆಯನ್ನ ಒಳಗಡೆ ಅತ್ತೆಯನ್ನ ಕುಕ್ಕರ್ ಮುಚ್ಚಳ ತೆಗೆಯಲು ಹೇಳಿ ಒಳಗಡೆ ಕಳಿಸಿದ್ದಾರೆ.

ಮಾಜಿ ಪಾಲಿಕೆ ಸದಸ್ಯ ವಿಷ್ಣುಸಾ ಪವಾರ ಎಂಬುವವರ ಮನೆಯಲ್ಲಿ ಘಟನೆ ನಡೆದಿದ್ದು, 19 ತೊಲೆ ಬಂಗಾರ ದೋಚುವುದು ಗೊತ್ತಾದ ತಕ್ಷಣವೇ ಮಹಿಳೆ ಬಾಗಿಲು ಹಾಕಲು ಪ್ರಯತ್ನಪಟ್ಟಿದ್ದಾರೆ. ಆದರೆ, ವಂಚಕರಿಬ್ಬರು ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಹಳೇಹುಬ್ಬಳ್ಳಿ ಠಾಣೆ ಇನ್ಸಪೆಕ್ಟರ್ ಶಿವಾನಂದ ಕಮತಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಗರದ ವಿವಿಧೆಡೆ ನಾಕಾಬಂದಿ ಹಾಕಲಾಗಿದೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ