Breaking News

ಅಪರಿಚಿತ ವ್ಯಕ್ತಿಗಳು ಅಂಗಡಿಗೆ ನುಗ್ಗಿಫೋಟೋಗ್ರಾಫರ್ ಮೇಲೆ ತಲ್ವಾರ್ ದಾಳಿ

Spread the love

ಮಂಗಳೂರು: ಏಕಾಏಕಿ ಸ್ಟುಡಿಯೋಗೆ ನುಗ್ಗಿ ಫೋಟೋಗ್ರಾಫರ್ ಮೇಲೆ ತಲ್ವಾರ್ ದಾಳಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ನಡೆದಿದೆ.

ದಿನೇಶ್ ಕೊಟ್ಟಿಂಜ ದಾಳಿಗೊಳಗಾದ ಫೋಟೋಗ್ರಾಫರ್. ಇವರು ಫರಂಗಿಪೇಟೆಯಲ್ಲಿ ಸ್ಟುಡಿಯೋ ಇಟ್ಟುಕೊಂಡಿದ್ದಾರೆ. ಅಪರಿಚಿತ ವ್ಯಕ್ತಿಗಳು ಅಂಗಡಿಗೆ ನುಗ್ಗಿ ದಾಳಿ ಮಾಡಿದ್ದಾರೆ.

ಘಟನೆಯಿಂದ ಗಂಭೀರ ಗಾಯಗೊಂಡ ದಿನೇಶ್ ಅವರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ ವೆಲೆಂಟೈನ್ ಡಿ.ಸೋಜ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಹಾಗೂ ಎಸ್.ಐ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪಂಚ ಗ್ಯಾರಂಟಿಗಳಿಗಾಗಿ ₹63 ಸಾವಿರ ಕೋಟಿ ಸಾಲ ಮಾಡಿದ ರಾಜ್ಯ ಸರ್ಕಾರ: ಸಿಎಜಿ ವರದಿ

Spread the love ಬೆಂಗಳೂರು: ಪಂಚ ಗ್ಯಾರಂಟಿಗಳಿಗಾಗಿ 2023-24 ಸಾಲಿನಲ್ಲಿ ಸಂಪನ್ಮೂಲ ಒದಗಿಸಲು ರಾಜ್ಯ ಸರ್ಕಾರ 63 ಸಾವಿರ ಕೋಟಿ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ