Breaking News

ಸರ್ಕಾರಿ ನೌಕರರು ಸಮಯ ಪ್ರಜ್ಞೆ ಯಿಂದ ಕಾರ್ಯನಿರ್ವಹಿಸಿದರೆ ಯಾವದೆ ಸಮಸ್ಯೆ ಇಲ್ಲದೆ ಜನರ ಸೇವೆ ಮಾಡಿ ನೆಮ್ಮದಿಯಿಂದ ನಿವೃತ್ತಿ ಹೊಂದಬಹುದು

Spread the love

ಸರ್ಕಾರಿ ನೌಕರರು ಸಮಯ ಪ್ರಜ್ಞೆ ಯಿಂದ ಕಾರ್ಯನಿರ್ವಹಿಸಿದರೆ ಯಾವದೆ ಸಮಸ್ಯೆ ಇಲ್ಲದೆ ಜನರ ಸೇವೆ ಮಾಡಿ ನೆಮ್ಮದಿಯಿಂದ ನಿವೃತ್ತಿ ಹೊಂದಬಹುದು ಎಂದು ಬೆಳಗಾವಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಭೀಮಪ್ಪಾ ಲಾಳಿ ಅಭಿಪ್ರಾಯ ಪಟ್ಟರು.

ಅವರು ಇಂದು ಹುಕ್ಕೇರಿ ತಾಲೂಕಾ ಪಂಚಾಯತ ಕಾರ್ಯಾಲಯದ ವ್ಯವಸ್ಥಾಪಕ ರಫೀಕ ಅಹ್ಮದ ಚಟ್ನಿ ಅವರ ಸೇವಾ ನಿವೃತ್ತಿ ಹೊಂದಿದ ಕಾರಣ ಬಿಳ್ಕೋಡುವ ಸಮಾರಂಭದ ಅದ್ಯಕ್ಷತೆ ವಹಿಸಿ ಅಭಿಪ್ರಾಯ ವ್ಯಕ್ತ ಪಡಿಸಿದರು.
ಪಟ್ಟಣದ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಏರ್ಪಡಿಸಿದ ಬೀಳ್ಕೋಡುವ ಸಮಾರಂಭದಲ್ಲಿ ಸುಮಾರು 40 ವರ್ಷ 5 ತಿಂಗಳಕಾಲ ಸರ್ಕಾರಿ ಸೇವೆಯನ್ನು ಯಾವದೇ ಕಪ್ಪು ಚುಕ್ಕೆ ಇಲ್ಲದೆ ಯಶಸ್ವಿಯಾಗಿ ಪೋರೈಸಿ ನಿವೃತ್ತಿ ಹೊಂದುತ್ತಿರುವ ತಾಲೂಕಾ ಪಂಚಾಯತ ವ್ಯವಸ್ಥಾಪಕ ಆರ್ ಎ ಚಟ್ನಿ ಯವರಿಗೆ ಆರ್ ಡಿ ಪಿ ಆಯ್ ಮತ್ತು ವಿವಿಧ ಇಲಾಖೆ ಅಧಿಕಾರಿಗಳಿಂದ ಹೃದಯ ಸ್ಪರ್ಶಿಯಾಗಿ ಸನ್ಮಾನಿಸಿ ಚಟ್ನಿ ಯವರ ಕಾರ್ಯವೈಕರಿ ಕುರಿತು ಕೊಂಡಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ರಫೀಕ ಚಟ್ನಿ ನನ್ನ ಸೇವಾ ಅವಧಿಯಲ್ಲಿ ಸಹಾಯ ಸಹಕಾರ ಮತ್ತು ಮಾರ್ಗದರ್ಶನ ನೀಡಿದ ಹಿರಿಯ ಅಧಿಕಾರಿಗಳಿಗೆ ಮತ್ತು ಸಚಿವ ಉಮೇಶ ಕತ್ತಿ ಹಾಗೂ ಮಾಜಿ ಸಂಸದ ರಮೇಶ ಕತ್ತಿಯವರಿಗೆ ಮತ್ತು ನನ್ನ ಸಹೋದ್ಯೋಗಿ ಗಳಿಗೆ ಅಭಿನಂದನೆ ಸಲ್ಲಿಸುತ್ತೆನೆ ಎಂದರು ,

Spread the love

About Laxminews 24x7

Check Also

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವ ಬಗ್ಗೆ ಎಲ್ಲಿಯೂ ಚರ್ಚೆಯಾಗಿಲ್ಲ. ಇದಕ್ಕೆ ನಮ್ಮ ಬೆಂಬಲದ ಅವಶ್ಯಕತೆಯಿಲ್ಲ.

Spread the love ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವ ಬಗ್ಗೆ ಎಲ್ಲಿಯೂ ಚರ್ಚೆಯಾಗಿಲ್ಲ. ಇದಕ್ಕೆ ನಮ್ಮ ಬೆಂಬಲದ ಅವಶ್ಯಕತೆಯಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ