Breaking News

ವಾಕಿಂಗ್​ನಲ್ಲಿದ್ದ ಮುಡಾ ಅಧಿಕಾರಿ ಇಡಿ ದಾಳಿ ಸುದ್ದಿ ಕೇಳ್ತಿದ್ದಂತೆ ಅಲ್ಲಿಂದಲೇ ರನ್ನಿಂಗ್!

Spread the love

ಸಿಎಂ ಸಿದ್ದರಾಮಯ್ಯರ ಬುಡಕ್ಕೆ ಸುತ್ತಿಕೊಂಡಿರುವ ಮುಡಾ ಹಗರಣದ ತನಿಖೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಮಹತ್ವದ ಬೆಳವಣಿಗೆಯಲ್ಲಿ ಮುಡಾ ಮಾಜಿ ಆಯುಕ್ತರು ಮತ್ತು ಮುಖ್ಯಮಂತ್ರಿ ಆಪ್ತರಿಗೆ ಇಡಿ ಶಾಕ್ ಕೊಟ್ಟಿದೆ. ಸೋಮವಾರ ಇಡಿ ಅಧಿಕಾರಿಗಳು ಬೆಂಗಳೂರು, ಮೈಸೂರು ಸೇರಿದಂತೆ ಒಟ್ಟು 9 ಕಡೆ ದಾಳಿ ನಡೆಸಿದ್ದಾರೆ.

ಈ ವೇಳೆ ಅಚ್ಚರಿಯ ಘಟನೆಯೊಂದು ನಡೆದಿದ್ದು, ಆ ಕುರಿತ ವಿವರ ಇಲ್ಲಿದೆ.

ಬೆಂಗಳೂರು, ಅಕ್ಟೋಬರ್ 29: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಒಂದು ಕಡೆ ಇಡಿ ಕಚೇರಿಯಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟ ಇಬ್ಬರನ್ನು ಕರೆಸಿ ವಿಚಾರಣೆ ನಡೆಸಲಾಗಿದೆ. ಮತ್ತೊಂದು ಕಡೆ ಬೆಂಗಳೂರಿನಲ್ಲಿ ವಾಸವಿರುವ ಮುಡಾದ ಮಾಜಿ ಆಯುಕ್ತರು, ಬಿಲ್ಡರ್ ಒಬ್ಬರ ಮನೆ ಮೇಲೂ ಇಡಿ ದಾಳಿ ನಡೆಸಿದೆ. ಅಷ್ಟಲ್ಲದೇ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತನ ಮೇಲೂ ದಾಳಿ ನಡೆಸಿದ್ದು, ಸೋಮವಾರ ತಡರಾತ್ರಿ ವರೆಗೂ ಪರಿಶೀಲನೆ ನಡೆಸಲಾಗಿದೆ.

ಈ ಮಧ್ಯೆ, ಮುಡಾ ಮಾಜಿ ಆಯುಕ್ತರಾದ ನಟೇಶ್ ಮತ್ತು ದಿನೇಶ್ ಕುಮಾರ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಇಡಿ ದಾಳಿ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ