Breaking News

ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತಿರಣೆ ಮಾಡುವ ಬಹುತೇಕ ಸಾಧ್ಯತೆಗಳಿವೆ

Spread the love

ಚಿಕ್ಕಮಗಳೂರು: ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತಿರಣೆ ಮಾಡುವ ಬಹುತೇಕ ಸಾಧ್ಯತೆಗಳಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಬಿಂಡಿಗೆ ದೇವಿರಮ್ಮನ ಬೆಟ್ಟದಲ್ಲಿ ದೇವಿರಮ್ಮನ ದರ್ಶನದ ಬಳಿಕ ಮಾತನಾಡಿದ ಅವರು, ವರಿಷ್ಠರು ಬಿಹಾರದ ವಿದ್ಯಾಮಾನಗಳಲ್ಲಿ ತೊಡಗಿಕೊಂಡಿರುವುದರಿಂದ ಮುಖ್ಯಮಂತ್ರಿ ಯಡಿಯೂರಪ್ಪನವರ ಭೇಟಿ ಸಾಧ್ಯವಾಗಿಲ್ಲ. ಹಬ್ಬದ ಬಳಿಕ ಸಿಎಂ ದೆಹಲಿಗೆ ಹೋಗಿ ಸಮಾಲೋಚನೆ ನಡೆಸಿ, ವಿಸ್ತರಣೆ ಮಾಡಲಿದ್ದಾರೆ. ಸಿಎಂ ಮನದಲ್ಲಿ ಪುನರ್ ರಚನೆಯ ಯೋಜನೆ ಇದೆ. ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಎಂಬುದನ್ನು ವರಿಷ್ಠರ ಜೊತೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಅಲ್ಲದೆ ಶೀಘ್ರದಲ್ಲೇ ಚಿಕ್ಕಮಗಳೂರಿಗೆ ಉಸ್ತುವಾರಿ ಸಚಿವರು ಬರುತ್ತಾರೆ ಎಂದರು.


Spread the love

About Laxminews 24x7

Check Also

‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ ಬಗ್ಗೆ ವಿಡಿಯೋ ಮಾಡಿದ್ದ ಕಿಡಿಗೇಡಿಗಳು.!

Spread the loveಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ವೈರಲ್ ಮಾಡಿದ್ದು ಭದ್ರತಾ ಲೋಪವನ್ನು ಬಯಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ