Home / Uncategorized / ಸರ್ಕಾರದ ಬೇಜವಾಬ್ದಾರಿಗೆ ಜನರು ಪ್ರಾಣಕಳೆದುಕೊಳ್ಳುವ ಸ್ಥಿತಿ ಬಂದಿದೆ

ಸರ್ಕಾರದ ಬೇಜವಾಬ್ದಾರಿಗೆ ಜನರು ಪ್ರಾಣಕಳೆದುಕೊಳ್ಳುವ ಸ್ಥಿತಿ ಬಂದಿದೆ

Spread the love

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಸಾವನ್ನಪ್ಪಿರುವ ದುರಂತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಈ ಸಾವಿಗೆ ಯಾರು ಹೊಣೆ. ಸರ್ಕಾರದ ಬೇಜವಾಬ್ದಾರಿಗೆ ಜನರು ಪ್ರಾಣಕಳೆದುಕೊಳ್ಳುವ ಸ್ಥಿತಿ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಆಕ್ಸಿಜನ್ ಪೂರೈಸಲೂ ಸರ್ಕಾರಕ್ಕೆ ಸಾಧ್ಯವಾಗದ ಸ್ಥಿತಿಬಂದಿದೆ ಇದೆಂತಹ ಸರ್ಕಾರ? ಬಿಜೆಪಿ ನಾಯಕರಿಗೆ ಪ್ರಚಾರ ಮುಖ್ಯವೇ ಹೊರತು ಜನರ ಜೀವಗಳು ಮುಖ್ಯವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿದೆ ಎಂದು ಹಲವು ದಿನಗಳಿಂದ ಹೇಳಲಾಗುತ್ತಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸಮಸ್ಯೆ ಬಗೆಹರಿಸುವ ಬದಲು ರಾಜ್ಯ ಸರ್ಕಾರ ಬೇಜವಾಬ್ದಾರಿ ಮೆರೆದಿದೆ. ಮಂತ್ರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಈ ವ್ಯವಸ್ಥೆ ಸರಿ ಹೋಗಲು ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಎಂದು ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ

Spread the loveಲೋಕಸಭಾ ಚುನಾವಣೆ ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ ಜಾರಿ ಬೆಂಗಳೂರು: ಲೋಕಸಭಾ ಚುನಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ