Breaking News

ಟಿಆರ್‌ಪಿ ಹಗರಣ : ಅರ್ನಬ್ ಗೋಸ್ವಾಮಿ ಹಾಗೂ ಬಾರ್ಕ್ ಮಾಜಿ ಸಿಇಒ ನಡುವಿನ ವಾಟ್ಸಾಪ್ ಚಾಟ್ ಸೋರಿಕೆ

Spread the love

ನವದೆಹಲಿ, ಜನವರಿ 15: ರಿಪಬ್ಲಿಕ್‌ ಟಿವಿಯ ಅರ್ನಬ್ ಗೋಸ್ವಾಮಿ ಮತ್ತು ಮಾಜಿ ಬಾರ್ಕ್ ಸಿಇಒ ಪಾರ್ಥೋ ದಾಸ್‌ಗುಪ್ತಾ ನಡುವಿನ ವಾಟ್ಸಾಪ್ ಚಾಟ್ ಸೋರಿಕೆಗೊಂಡಿದ್ದು, ಟ್ವಿಟರ್‌ನಲ್ಲಿ ಹರಿದಾಡಿವೆ.

ಗೋಸ್ವಾಮಿ ಮತ್ತು ಬಾರ್ಕ್ ಸಿಇಒ ನಡುವಿನ ವಾಟ್ಸಾಪ್ ಚಾಟ್‌ ಸ್ಕ್ರೀನ್‌ಶಾಟ್‌ಗಳು ಟ್ವಿಟರ್‌ನಲ್ಲಿ ಸ್ಪೋಟಗೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

”ಇವುಗಳು ಬಾರ್ಕ್ ಸಿಇಒ ಮತ್ತು ಅರ್ನಬ್ ಗೋಸ್ವಾಮಿ ನಡುವಿನ ಸೋರಿಕೆಯಾದ ವಾಟ್ಸಾಪ್ ಚಾಟ್‌ಗಳ ಕೆಲವು ಸ್ನ್ಯಾಪ್‌ಶಾಟ್‌ಗಳಾಗಿವೆ. ಇವು ಅವರನ್ನ ಪವರ್ ಬ್ರೋಕರ್ ಆಗಿ ಗುರುತಿಸಿದ್ದು, ಅನೇಕ ಪಿತೂರಿಗಳನ್ನು ತೋರಿಸುತ್ತದೆ ಮತ್ತು ದೇಶದ ಯಾವುದೇ ಕಾನೂನು ನಿಯಮಗಳ ಪ್ರಕಾರ ಅವರು ದೀರ್ಘಕಾಲ ಜೈಲಿನಲ್ಲಿರುತ್ತಾರೆ ” ಎಂದು ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ.

ಇನ್ನು ಅರ್ನಬ್ ಗೋಸ್ವಾಮಿ ಮತ್ತು ಬಾರ್ಕ್ ಸಿಇಒ ನಡುವಿನ ವಾಟ್ಸಾಪ್ ಚಾಟ್‌ ಸಂಭಾಷಣೆಯು ಅಧಿಕೃತವಾಗಿದ್ದರೆ, ಮುಂದಿನ ದಿನಗಳಲ್ಲಿ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು.

ಟಿಆರ್‌ಪಿ ಹಗರಣ ಪ್ರಕರಣದ ವಿಚಾರಣೆಯನ್ನು ಮುಂಬೈ ಹೈಕೋರ್ಟ್ ಜನವರಿ 29 ರವರೆಗೆ ಮುಂದೂಡಿದೆ. ಮುಂದಿನ ವಿಚಾರಣೆಯವರೆಗೆ ಗೋಸ್ವಾಮಿಯನ್ನು ಬಂಧಿಸುವುದಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ದೇವಾಲಯದ ಸುತ್ತ ಮಾಂಸಾಹಾರ ನಿಷೇಧ ನೋಟಿಸ್‌ ವಾಪಸ್​: ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಮಾಹಿತಿ

Spread the loveಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದಲ್ಲಿನ ಹೊನ್ನೇಶ್ವರ ದೇವಾಲಯದ ಸುತ್ತಲು ಪ್ರಾಣಿಗಳ ವಧೆ ಮತ್ತು ಮಾಂಸಾಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ