Breaking News

ಗಣರಾಜ್ಯೋತ್ಸವದಂದು ಎಂಎಸ್‌ಪಿಗಾಗಿ ಮೈಸೂರಿನಲ್ಲಿ ರೈತರಿಂದ ಟ್ರ್ಯಾಕ್ಟರ್ ರ‍್ಯಾಲಿ (

Spread the love

ಮೈಸೂರು: ದೆಹಲಿ ಗಡಿಯಲ್ಲಿ ಕೃಷಿ ಉತ್ಪನ್ನಗಳಿಗೆ ಎಂಎಸ್​ಪಿ ಗ್ಯಾರಂಟಿ ಕಾನೂನು ಜಾರಿಗಾಗಿ ಹೋರಾಡುತ್ತಿರುವ ಜಗಜಿತ್ ಸಿಂಗ್ ದಲೈವಾಲಾ ಅವರ 62 ದಿನದ ಉಪವಾಸ ಬೆಂಬಲಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಟ್ರ್ಯಾಕ್ಟರ್ ರ‍್ಯಾಲಿ ನಡೆಸಲಾಯಿತು.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ, ಡಾ.ಸ್ವಾಮಿನಾಥನ್ ವರದಿ ಜಾರಿ, ರೈತರ ಸಂಪೂರ್ಣ ಸಾಲ ಮನ್ನಾ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೇತರ ಸಂಘಟನೆ ರಾಷ್ಟ್ರೀಯ ಸಂಚಾಲಕ ಜಗಜಿತ್ ಸಿಂಗ್ ಧಲೈವಾಲಾ ಅವರು 62 ದಿನದ ಉಪವಾಸ ಸತ್ಯಾಗ್ರಹ ಮಾಡಿದ್ದಾರೆ.

ಇದನ್ನು ಬೆಂಬಲಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಟ್ರ್ಯಾಕ್ಟರ್ ರ‍್ಯಾಲಿಗೆ ಮೈಸೂರಿನಲ್ಲಿ ಬೆಂಬಲಿಸಲಾಯಿತು.ನಗರದ ಎಪಿಎಂಸಿ ವೃತ್ತದಿಂದ ಹೊರಟು ನಂಜನಗೂಡು ರಾಷ್ಟ್ರೀಯ ಹೆದ್ದಾರಿ ಕಡಕೋಳ ಬಳಿ ಇರುವ ಟೋಲ್ ತನಕ ಟ್ರ್ಯಾಕ್ಟರ್ ರ‍್ಯಾಲಿ ನಡೆಸಿ ಅರ್ಧ ಗಂಟೆಗೂ ಹೆಚ್ಚು ಕಾಲ ಟೋಲ್ ಬಂದ್ ಮಾಡಿ ಕೇಂದ್ರ ಸರ್ಕಾರಕ್ಕೆ ರೈತರು ಎಚ್ಚರಿಕೆ ನೀಡಿದರು. ಸುಮಾರು 6 ಕಿ.ಮೀ ತನಕ ಎರಡು ಭಾಗದಲ್ಲೂ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ