Breaking News

ಸಂಡೂರಲ್ಲಿ ತುಕಾರಾಂ ಪತ್ನಿ ಅನ್ನಪೂರ್ಣರಿಗೆ `ಕೈ’ ಟಿಕೆಟ್; ಸಿಎಂ

Spread the love

ಮೈಸೂರು: ರಾಜ್ಯದಲ್ಲಿ ಉಪಚುನಾವಣೆಯ (By-Election) ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಒಟ್ಟು ಮೂರು ಕ್ಷೇತ್ರಗಳಿಗೆ ಈ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ (BJP-JDS Alliance) ಪಕ್ಷಗಳು ಈಗಾಗಲೇ ಎರಡು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿವೆ.

ಆದರೆ ಈವರೆಗೂ ಕಾಂಗ್ರೆಸ್ (Congress) ಯಾವುದೇ ಕ್ಷೇತ್ರಕ್ಕೂ ಟಿಕೆಟ್ ಘೋಷಣೆ ಮಾಡಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಸಂಡೂರಿನಲ್ಲಿ ತುಕಾರಾಂ ಕುಟುಂಬಕ್ಕೆ ಟಿಕೆಟ್ ಫೈನಲ್ ಮಾಡಿದ್ದೇವೆ ಎಂದು ಹೇಳಿದ್ದಾರೆ.

ತುಕಾರಾಂ ಪತ್ನಿಗೆ ಟಿಕೆಟ್

ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಂಡೂರಿನಲ್ಲಿ ಸಂಸದ ತುಕಾರಾಂ ಕುಟುಂಬಕ್ಕೆ ಟಿಕೆಟ್ ಫೈನಲ್ ಮಾಡಿದ್ದೇವೆ, ಅವರ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ನೀಡುತ್ತೇನೆ. ಇನ್ನು ಚನ್ನಪಟ್ಟಣ ಶಿಗ್ಗಾವಿ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಆ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ