Breaking News
Home / ರಾಜಕೀಯ / ನಾಯಿಗೆ ಊಟ ತಡವಾಗಿ ಹಾಕಿದ್ದಕ್ಕೆ 21 ವರ್ಷದ ಯುವಕನನ್ನು ಬೆಲ್ಟ್‌ನಿಂದ ಹೊಡೆದು ಕೊಂದ

ನಾಯಿಗೆ ಊಟ ತಡವಾಗಿ ಹಾಕಿದ್ದಕ್ಕೆ 21 ವರ್ಷದ ಯುವಕನನ್ನು ಬೆಲ್ಟ್‌ನಿಂದ ಹೊಡೆದು ಕೊಂದ

Spread the love

 ಕ್ಷುಲಕ ಕಾರಣಕ್ಕೆ ಯುವಕನೋರ್ವ ಜೊತೆಯಲ್ಲಿದ್ದ ಸಹೋದರ ಸಂಬಂಧಿ ಯುವಕನನ್ನು ಭೀಕರವಾಗಿ ಹಿಂಸಿಸಿ ಕೊಲೆಗೈದ ಘಟನೆ ಪಾಲಕ್ಕಾಡ್‌ನ ಮನ್ನೆಂಗೋಡ್‌ ನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಹರ್ಷದ್‌ (27) ಸಾವಿಗೀಡಾದ ಯುವಕ.

ಹಕೀಂ (27) ಕೃತ್ಯವೆಸಗಿದ ಆರೋಪಿ.

ಘಟನೆ ಹಿನ್ನೆಲೆ: ಹರ್ಷದ್ ಹಾಗೂ ಹಕೀಂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಬ್ಬರು ಖಾಸಗಿ ಮೊಬೈಲ್‌ ಟೆಲಿಕಾಂ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಹಕೀಂ ಹರ್ಷದ್‌ ರನ್ನು ಯಾವಾಗಲೂ ಸೇವಕನಂತೆ ನೋಡಿಕೊಳ್ಳುತ್ತಿದ್ದ. ಸಂಬಂಧಿಯಾದ ಕಾರಣ ಹರ್ಷದ್‌ ಸುಮ್ಮನಿದ್ದು ಮಾತು ಕೇಳಿಕೊಂಡು ಇರುತ್ತಿದ್ದ. ಗುರುವಾರ ( ನವೆಂಬರ್‌ 3 ರಂದು) ಹಕೀಂ ತನ್ನ ಮನೆಯ ಸಾಕು ನಾಯಿಗೆ ಹರ್ಷದ್‌ ತಡವಾಗಿ ಊಟ ಹಾಕಿದ್ದಕ್ಕೆ ಸಿಟ್ಟಾಗಿ, ನಾಯಿಗೆ ಹಾಕಿದ್ದ ಬೆಲ್ಟ್‌ ಹಾಗೂ ಮರದ ವಸ್ತುವಿನಿಂದ ಹೊಡೆಯಲು ಆರಂಭಿಸಿದ್ದಾನೆ. ನೋವಿನಲ್ಲಿ ನರಳುತ್ತಿದ್ದರು ಹೊಡೆಯುತ್ತಲೇ ಹಕೀಂ ಹರ್ಷದ್‌ ರನ್ನು ಒದ್ದು ಮನೆಯಿಂದ ಕೆಳಕ್ಕೆ ದೂಡಿದ್ದಾನೆ.

ತೀವ್ರವಾಗಿ ಗಾಯಗೊಂಡ ಹರ್ಷದ್‌ ರನ್ನು ಸ್ವತಃ ಹಕೀಂ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ವೈದ್ಯರ ಬಳಿ ಈತ ಮನೆಯ ಮೇಲಿಂದ ಬಿದ್ದಿದ್ದಾನೆ ಎಂದು ಹೇಳಿದ್ದಾನೆ. ಆದರೆ ವೈದ್ಯರು ಹರ್ಷದ್‌ ಅವರ ಬೆನ್ನ ಹಿಂದಿನ ಗಾಯ ನೋಡಿ ಅನುಮಾನಗೊಂಡು ಪೊಲೀಸರಿಗೆ ತಿಳಿಸಿದ್ದಾರೆ.

ಶನಿವಾರ (ನ.5) ಪೊಲೀಸರು ಹಕೀಂರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಹಕೀಂ ಸತ್ಯ ಬಾಯಿ ಬಿಟ್ಟಿದ್ದಾನೆ.

ಹರ್ಷದ್‌ ನಿಗೆ ಬೆಲ್ಟ್‌ ಹಾಗೂ ಮರದ ವಸ್ತುವಿನಿಂದ ಹೊಡೆದ ಪರಿಣಾಮ ಆತನಿಗೆ 160 ಕ್ಕೂ ಹೆಚ್ಚು ಗಾಯಗಳಾಗಿತ್ತು. ಆಸ್ಪತ್ರೆಗೆ ಕರೆದುಕೊಂಡು ಬರುವಾಗಲೇ ಆತ ತೀವ್ರ ಗಾಯಗೊಂಡು ಸಾವನ್ನಪ್ಪಿದ್ದ ಎಂದು ವರದಿ ತಿಳಿಸಿದೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ