Breaking News

ಮಕ್ಕಳು ಹೂ ಕಿತ್ತಿದ್ದಕ್ಕೇ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ದುಷ್ಟ!

Spread the love

ಬೆಳಗಾವಿ :‌ ಅಂಗನವಾಡಿಯ ಮಕ್ಕಳು ಪಕ್ಕದ ಮನೆಯ ಆವರಣದಲ್ಲಿದ್ದ ಹೂ ಕಿತ್ತರೆಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ಅಂಗನವಾಡಿ ಸಹಾಯಕಿಯಾಗಿ ಕೆಲಸಮಾಡುತ್ತಿದ್ದ ಮಹಿಳೆಯ ಮೂಗನ್ನು ಕುಡುಗೋಲಿನಿಂದ ಕತ್ತರಿಸಿರುವ ದುರ್ಘಟನೆ ಬಸುರ್ತೆ ಗ್ರಾಮದಲ್ಲಿ ನಡೆದಿದೆ. ಸುಗಂಧಾ ಮೋರೆ( 50) ಹಲ್ಲೆಗೊಳಗಾದ ಮಹಿಳೆಯಾಗಿದ್ದು, ಅದೇ ಗ್ರಾಮದ ಕಲ್ಯಾಣಿ ಮೋರೆ ಈ ದುಷ್ಕೃತ್ಯ ಎಸಗಿದ್ದಾನೆ.

 

ಅಂಗನವಾಡಿ ಸಹಾಯಕಿಯಾಗಿ ಸುಗಂಧಾ ಕೆಲಸ ಮಾಡುತ್ತಿದ್ದರು. ಅವರ ಅಂಗನವಾಡಿಯ ಮಕ್ಕಳು ಕಲ್ಯಾಣಿ ಮೋರೆ ಮನೆಯ ಮುಂದಿರುವ ಮಲ್ಲಿಗೆ ಹೂ ಗಿಡದಿಂದ ಹೂ ಕಿತ್ತಿದ್ದರು. ಇದರಿಂದ ಕುಪಿತನಾಗಿದ್ದ‌ ಕಲ್ಯಾಣಿ ಮೋರೆ ಸುಗಂಧಾ ಅವರೊಡನೆ ಜಗಳ ತೆಗಿದಿದ್ದು, ಈಕೃತ್ಯ ಎಸಗಿದ್ದಾನೆ.

ಸುಗಂಧಾ ಅವರನ್ನುಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಶ್ವಾಸಕೋಶದೊಳಗೆ ರಕ್ತ ಸೇರಿಕೊಂಡು ಉಸಿರಾಟಕ್ಕೆ ತೊಂದರೆಯಾಗಿರುವ ಪರಿಣಾಮ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಕಲ್ಯಾಣಿ ಮೋರೆ ಪರಾರಿಯಾಗಿದ್ದು, ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಯಬಾಗ: ರೇಬಿಸ್ ಲಸಿಕಾ ಅಭಿಯಾನಕ್ಕೆ ಚಾಲನೆ

Spread the love ರಾಯಬಾಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರಾಮಕೃಷ್ಣ ಪಬ್ಲಿಕ್ ಸ್ಕೂಲ್ ಬೆಕ್ಕೇರಿ ಇವರ ಸಹಯೋಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ