Breaking News

ವಿದ್ಯಾರ್ಥಿಗಳು ಶಿಕ್ಷಣದತ್ತ ಗಮನಹರಿಸಲಿ

Spread the love

ಅಥಣಿ ಗ್ರಾಮೀಣ: ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಿ ಕಲಿಕಾ ಗುಣಮಟ್ಟದಲ್ಲಿ ಯಶಸ್ವಿಯಾಗುತ್ತಿರುವುದು ಗ್ರಾಮೀಣ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಕಾರಣ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭ ಹಾಗೂ ಸ್ನೇಹಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಲವಾರು ಸಾಹಿತಿಗಳು, ತತ್ತ್ವಜ್ಞಾನಿಗಳು ಕಾಯಕ ನಿಷ್ಠೆ ಹಾಗೂ ನಿರಂತರ ಪ್ರಯತ್ನದಿಂದ ಸಾಧಕರಾಗಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಇದನ್ನು ಅರಿತು ಮೊಬೈಲ್, ಟಿವಿಯಿಂದ ದೂರವಿದ್ದು, ಶಿಕ್ಷಣದತ್ತ ಗಮನಹರಿಸಬೇಕು. ಶಿಕ್ಷಣ ಪಡೆದು ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುವಂತಾಗಬೇಕು ಎಂದರು.
ಅರ್ಚಕ ಸದಾಶಿವ ಮಠಪತಿ ಹಾಗೂ ಪ್ರದೀಪ ಉಪಾಧ್ಯಾಯ ಮಾತನಾಡಿ, ಪಾಲಕರು ಮಕ್ಕಳಿಗಾಗಿ ಆಸ್ತಿ ಗಳಿಸುವ ಬದಲು ಅವರು ಆದರ್ಶವಾಗುವ ರೀತಿಯಲ್ಲಿ ನಡೆ-ನುಡಿಯಿಂದ ನಡೆದುಕೊಳ್ಳಬೇಕು ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ಶೀತಲ ಬಿರಾದಾರಪಾಟೀಲ, ಮುಖಂಡರಾದ ಶಿವಪ್ಪ ನೇಮಗೌಡ, ಭೂಪಾಲ ಹಳಿಂಗಳಿ, ಜಿನಗೌಡ ಸೌದತ್ತಿ, ಜಿನಗೌಡ ಪಾಟೀಲ, ಕುಮಾರ ನೇಮಗೌಡ, ಮಹಾವೀರ ಜನಾಜ, ಭರತೇಶ ನೇಮಗೌಡ, ಭೂಪಾಲ ಹಳಿಂಗಳಿ, ಎಂ.ಆರ್.ಮುಂಜೆ, ಜಿ.ಎ.ಖೋತ, ಮುಖ್ಯಶಿಕ್ಷಕಿ ಪೂಜಾ ನಡುವಿನಮನಿ, ಸಚಿನ ಅಂಬಿ ಇತರರಿದ್ದರು.

Spread the love

About Laxminews 24x7

Check Also

ಬಿಜೆಪಿಗೆ ಅಬಕಾರಿ ಸಚಿವರೇ ಟಾರ್ಗೆಟ್:ಸಿದ್ಧಾರ್ಥ ಸಿಂಗೆ ಆಕ್ರೋಶ

Spread the loveಅಥಣಿ ಗ್ರಾಮೀಣ: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಬಾರ್ ಲೈಸನ್ಸ್ ಹಂಚಿಕೆ ಹಗರಣ ವಿಚಾರದಲ್ಲಿ ವಿನಾಕಾರಣ ಅಬಕಾರಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ