ತಾಳಿಕೋಟೆ: ತಾಲ್ಲೂಕಿನ ಗಡಿ ಸೋಮನಾಳ ಗ್ರಾಮದ ತಾಂಡಾಕ್ಕೆ ಹೊಂದಿಕೊಂಡಿರುವ ಜಮೀನೊಂದರಲ್ಲಿ ಕಳ್ಳಬಟ್ಟಿ ತಯಾರಿಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪಿ.ಎಸ್ ಐ ವಸಂತ ಬಂಡಗಾರ ಅವರ ನೇತೃತ್ವದಲ್ಲಿ ಶನಿವಾರ ಮದ್ಯಾಹ್ನ ದಾಳಿ ಮಾಡಿ ಜಮೀನಿನಲ್ಲಿ ಹೂತ್ತಿಟ್ಟ ಸುಮಾರು ೨೦೦ ಲೀಟರ್ಗೂ ಅಧಿಕ ಕಚ್ಚಾ ಸಾಮಗ್ರಿಗಳನ್ನು ನಾಶ ಪಡಿಸಿದ್ದಾರೆ.
ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಸರ್ಕಾರವು ಮದ್ಯ ಮಾರಾಟವನ್ನು ಸ್ಥಗಿತಗೊಳಿಸಿದ್ದರಿಂದ ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ಕೆಲವರು ಕಳ್ಳಭಟ್ಟಿ ಸರಾಯಿ ತಯಾರಿಸಿ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ೨೦೦ ಲೀಟರ್ಗೂ ಕಳ್ಳಭಟ್ಟಿ ಸರಾಯಿ ಹಾಗೂ ಅಧಿಕ ಕಚ್ಚಾ ಸಾಮಗ್ರಿಗಳನ್ನು ನಾಶಪಡಿಸಿದ್ದಾರೆ. ದಾಳಿ ಸಮಯದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಎಂ.ಎಸ್.ಅವಟಿ, ಆರ್.ಎಸ್.ವಡೆಯರ, ಡಿ.ಬಿ.ಕಳ್ಳಿಗುಡ್ಡ, ಜಿ.ಎಂ.ನಾಯಕ, ಸೋಮು ರಾಠೋಡ, ಮೊದಲಾದವರು ಪಾಲ್ಗೊಂಡಿದ್ದರು.