ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧೆ ಮಾಡಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ಸೂಚನೆ ನೀಡಿದ್ದಾರೆ :ಸತೀಶ ಜಾರಕಿಹೊಳಿ

Spread the love

ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧೆ ಮಾಡಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ತಯಾರಿ ನಡೆಸುವಂತೆ ಎಲ್ಲರಿಗೂ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಶನಿವಾರ ನಗರದ ಕುಮಾರ ಗಂಧರ್ವ ರಂಗ ಮಂದಿರದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಿಸಬೇಕು. ಆದ್ದರಿಂದ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕೆಂದು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಎಲ್ಲರಿಗೂ ಸೂಚನೆ ನೀಡಿದ್ದಾರೆ. ನಮ್ಮ‌ ಜಿಲ್ಲೆಯಲ್ಲಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸುವುದು ನಮ್ಮ ಡ್ಯೂಟಿ ಇದೆ. ಅದನ್ನು ಮಾಡುತ್ತೇವೆ. ಈಗಾಗಲೇ ಬೆಂಗಳೂರಿನಲ್ಲಿ ಒಂದು ಬಾರಿ ಅಭ್ಯರ್ಥಿ ಆಯ್ಕೆಯ ಬಗ್ಗೆ ಚರ್ಚೆಯಾಗಿದೆ. ಎರಡನೇ ಬಾರಿ ಆದಷ್ಟು ಬೇಗ ಬೆಳಗಾವಿಯಲ್ಲಿ ಸಭೆ ಮಾಡಿ ಚರ್ಚೆ ಮಾಡುತ್ತೇವೆ ಎಂದರು.

ಹೈಕಮಾಂಡ್ ನನಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸಬೇಕೆಂದು ಸೂಚನೆ ನೀಡಿಲ್ಲ. ಆಕಾಂಕ್ಷಿ ಅಭ್ಯರ್ಥಿಗಳನ್ನು ಹುಡುಕಾಟ ನಡೆಸಬೇಕಿದೆ. ಹಾಲಿ ಹಾಗೂ ಮಾಜಿ ಸಚಿವರಿಗೆ ಸ್ಪರ್ಧೆ ಮಾಡಬೇಕೆಂದು ಎಲ್ಲಿಯೂ ಹೇಳಿಲ್ಲ. ಗೆಲ್ಲುವ ಅಭ್ಯರ್ಥಿಗೆ ಮಣೆ ಹಾಕಿ ಅವರಿಗೆ ಅವಕಾಶ ಕೊಡುತ್ತೇವೆ. ವಿಧಾನಸಭಾ ‌ಚುನಾವಣೆಯ ಮಾದರಿಯಲ್ಲಿ ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಎದುರಿಸಲಿದೆ. ಆದರೆ ಈ ಚುನಾವಣೆಯಲ್ಲಿ ಹೆಚ್ಚಿನ ಜವಾಬ್ದಾರಿ ಇದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.


Spread the love

About Laxminews 24x7

Check Also

ಕೌಟುಂಬಿಕ ಕಲಹದಿಂದ ಕುಡುಗೋಲಿನಿಂದ ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ

Spread the love ಕಲಬುರ್ಗಿ: ಕೌಟುಂಬಿಕ ಕಲಹಕ್ಕೆ ಬೇಸತ್ತಂತ ಪತಿಯೊಬ್ಬ, ಪತ್ನಿಯನ್ನೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೈದು, ಪೊಲೀಸ್ ಠಾಣೆಗೆ ತೆರಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ