Breaking News

ಲಾರಿ- ಖಾಸಗಿ ಬಸ್‌ ಡಿಕ್ಕಿ: 13 ಮಂದಿ ಸಜೀವ ದಹನ

Spread the love

ಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ ಟಿಪ್ಪರ್ ಲಾರಿ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದು ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಇದರ ಪರಿಣಾಮ ಬಸ್‌ನಲ್ಲಿದ್ದ 10 ಪ್ರಯಾಣಿಕರು ಸಜೀವ ದಹನವಾದರೆ, 18 ಮಂದಿ ಗಾಯಗೊಂಡಿದ್ದಾರೆ.

ಬಸ್ ಮತ್ತು ಟಿಪ್ಪರ್ ಎರಡೂ ಸಂಪೂರ್ಣ ಸುಟ್ಟು ಕರಕಲಾಗಿವೆ. ಗಾಯಾಳುಗಳನ್ನು ಮಾರ್ಕಪುರಂನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.

ಹೈದರಾಬಾದ್‌ನಿಂದ ಪಾಮುರು ಕಡೆಗೆ ಸಂಚರಿಸುತ್ತಿದ್ದ ಬಸ್ ಪಲಕಲಾ ಕ್ವಾರಿಗಳ ಬಳಿ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಬಸ್‌ನಲ್ಲಿ ಹಿಂಭಾಗ ಕುಳಿತಿದ್ದ ಹಲವರು ಸಾವನ್ನಪ್ಪಿದ್ದಾರೆ. ಮುಂಭಾಗ ಕುಳಿತಿದ್ದ ಸುಮಾರು 10 ಪ್ರಯಾಣಿಕರು ಬದುಕುಳಿದಿದ್ದಾರೆ ಎಂದು ತಿಳಿದು ಬಂದಿದೆ.

ಮಾರ್ಕಪುರಂ ಶಾಸಕ ಕಂದುಲ ನಾರಾಯಣ ರೆಡ್ಡಿ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ. ಇನ್ನೂ ಘಟನೆ ಕುರಿತು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಆಘಾತ ವ್ಯಕ್ತ ಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಕೋರಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಘಟನೆಯ ಸಂಪೂರ್ಣ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ.


Spread the love

About Laxminews 24x7

Check Also

ಆ ವಿಧಿಯನ್ನ ಶಪಿಸಬೇಕಾ? ಹೆತ್ತವರನ್ನ ಬೈಬೇಕಾ ಗೊತ್ತಾಗ್ತಿಲ್ಲಖಾಸಗಿ ಶಾಲಾ ಬಸ್ಸಿನ ಮುಂಬದಿ ಚಕ್ರಕ್ಕೆ ಸಿಲುಕಿ ಬಾಲಕಿ ಸ್ಥಳದಲ್ಲಿಯೇ ಪ್ರಾಣಬಿಟ್ಟಿದೆ.

Spread the love ಆ ವಿಧಿಯನ್ನ ಶಪಿಸಬೇಕಾ? ಹೆತ್ತವರನ್ನ ಬೈಬೇಕಾ ಗೊತ್ತಾಗ್ತಿಲ್ಲ ಎಷ್ಟು ಮುದ್ದಾದ ಮಗು ಅರೆ ಕ್ಷಣದ ಮುಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ