Breaking News

ಬಿಜೆಪಿಯ ಕೊಳಕು ರಾಜಕಾರಣವನ್ನು ಜನರು ಸೋಲಿಸಿದ್ದಾರೆ: ಅರವಿಂದ ಕೇಜ್ರಿವಾಲ್‌

Spread the love

ನವದೆಹಲಿ: ರಾಜಿಂದರ್ ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಎಎಪಿ ಅಭ್ಯರ್ಥಿ ಗೆಲುವಿಗೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಹರ್ಷ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ಬಿಜೆಪಿಯ ಕೊಳಕು ರಾಜಕಾರಣವನ್ನು ಜನರು ಸೋಲಿಸಿದ್ದಾರೆ ಎಂದು ಕೇಜ್ರಿವಾಲ್‌ ಹೇಳಿಕೆ ನೀಡಿದ್ದಾರೆ.

 

ಜನರಿಗೆ ಧನ್ಯವಾದ ಅರ್ಪಿಸಿ ಟ್ವೀಟ್‌ ಮಾಡಿರುವ ಅವರು, ‘ರಾಜಿಂದರ್ ನಗರದ ಜನರಿಗೆ ಹೃತ್ಪೂರ್ವಕ ಧನ್ಯವಾದಗಳು. ದೆಹಲಿಯ ಜನರ ಈ ಅಪಾರ ಪ್ರೀತಿಗೆ ನಾನು ಕೃತಜ್ಞನಾಗಿದ್ದೇನೆ. ಇದು ನಮಗೆ ಹೆಚ್ಚು ಶ್ರಮಿಸಲು ಮತ್ತು ಜನರ ಸೇವೆ ಮಾಡಲು ಸ್ಫೂರ್ತಿ ನೀಡಲಿದೆ’ ಎಂದು ತಿಳಿಸಿದ್ದಾರೆ.

‘ಜನರು ಅವರ (ಬಿಜೆಪಿ) ಕೊಳಕು ರಾಜಕೀಯವನ್ನು ಸೋಲಿಸಿದ್ದಾರೆ. ನಮ್ಮ ಉತ್ತಮ ಕೆಲಸವನ್ನು ಮೆಚ್ಚಿದ್ದಾರೆ’ ಎಂದು ಅವರು ಟ್ವೀಟಿಸಿದ್ದಾರೆ.

ರಾಜಿಂದರ್ ನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ದುರ್ಗೇಶ್ ಪಾಠಕ್ ಅವರು ಗೆಲುವು ದಾಖಲಿಸಿದ್ದಾರೆ. ಪಾಠಕ್ ಅವರು ಬಿಜೆಪಿಯ ಅಭ್ಯರ್ಥಿ ರಾಜೇಶ್ ಭಾಟಿಯಾ ವಿರುದ್ಧ 11,000ಕ್ಕೂ ಹೆಚ್ಚು ಮತಗಳ ಅಂತರದ ಜಯ ಸಾಧಿಸಿದ್ದಾರೆ.


Spread the love

About Laxminews 24x7

Check Also

ಕಂಬಳ ಅತ್ಯಂತ ಜನಪ್ರಿಯ ಗ್ರಾಮೀಣ ಕ್ರೀಡೆ: ಸಿಎಂ ಸಿದ್ದರಾಮಯ್ಯ

Spread the love    ಮಂಗಳೂರು : ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ